Advertisement
ವೆದರ್ ಮಿರರ್

ಹವಾಮಾನ ವರದಿ | 24.10.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Share

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement
Advertisement

ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಗಾಳಿಯ ಪಾತ್ರ ಮಹತ್ವದ್ದು. ಉಡುಪಿ ಮಧ್ಯಾಹ್ನ ನಂತರ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ. 25ರಂದು ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದ್ದು, 26ರಿಂದ ಮಳೆಯ ಸಾಧ್ಯತೆ ಕಾಣುತ್ತಿಲ್ಲ.

Advertisement

ಕೊಡಗು ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಮತ್ತು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ. 25ರಂದು ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 26ರಿಂದ ಮಳೆಯ ಸಾಧ್ಯತೆ ಕಾಣುತ್ತಿಲ್ಲ.

ಉತ್ತರ ಒಳನಾಡಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಅ. 25ರಿಂದ ಮಳೆಯ ಸಾಧ್ಯತೆ ತೀರಾ ಕಡಿಮೆಯಾಗಲಿದೆ.

Advertisement

ಬಂಗಾಳಕೊಲ್ಲಿಯ ಡಾನಾ ಚಂಡಮಾರುತವು ಇಂದು ರಾತ್ರಿ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಅರಬ್ಬಿ ಸಮುದ್ರದ ತಿರುವಿಕೆಯ ಇನ್ನಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ.

ಈಗಿನಂತೆ ಚಂಡಮಾರುತದ ಪ್ರಭಾವದಿಂದ ಹಿಂಗಾರು ಅತಿ ದುರ್ಬಲಗೊಂಡಿದ್ದು, ಈಗಿನ ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾಗುವ ಮೋಡಗಳಿಂದ ಅ. 29ರಿಂದ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಮತ್ತು 30ರಿಂದ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಚೀನಾದಲ್ಲಿ ಎಳೆ ಅಡಿಕೆಗೆ ಬೇಡಿಕೆ | ಅಡಿಕೆ ಕ್ಯಾಂಡಿಯತ್ತ ಆಕರ್ಷಿತರಾದ ಜನ | ಜನಪ್ರಿಯತೆ ಹೆಚ್ಚಿಸುತ್ತಿರುವ ಅಡಿಕೆ ಕ್ಯಾಂಡಿ |

ಅಡಿಕೆ ಕ್ಯಾಂಡಿ ಶುಂಠಿ ಕ್ಯಾಂಡಿಯಂತೆ ಸಿಹಿಯಾದ, ಸ್ವಲ್ಪ ಮಸಾಲೆಯುಕ್ತ ರುಚಿಯನ್ನು ಹೊಂದಿರುತ್ತದೆ. ಇದು …

8 hours ago

ಒಡಿಶಾ ಕರಾವಳಿಗೆ ಅಪ್ಪಳಿಸಲು ಸಿದ್ಧವಾದ “ಡಾನಾ ಚಂಡಮಾರುತ ” | ಒಡಿಶಾ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಹೈಎಲರ್ಟ್‌ |

ದೇಶದಲ್ಲಿ ಡಾನಾ ಚಂಡಮಾರುತವು ಬಲಗೊಂಡಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯವು ಚಂಡಮಾರುತಾವಗಿ ಮಾರ್ಪಟ್ಟು ಇದೀಗ…

18 hours ago

ಹಣವನ್ನೇನು ಮಾಡುವುದು? ಎಫ್.ಡಿ.ಯಾ? ದೇಣಿಗೆಯಾ?

ನಮ್ಮ ದೇಶದಲ್ಲಿ ಜ್ಞಾನವಂತ ಯುವ ಜನರನ್ನು ಸೃಷ್ಟಿಸುವುದು ದೇಶವನ್ನು ಬಲಿಷ್ಟಗೊಳಿಸುವ ಕಾರ್ಯವಾಗಿದೆ. ಈ…

19 hours ago

ರಾಜ್ಯದಲ್ಲಿ ಇನ್ನು 6 ದಿನಗಳ ಕಾಲ ಧಾರಾಕಾರ ಮಳೆ | 16 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ | ಹವಾಮಾನ ಇಲಾಖೆ ಮಾಹಿತಿ |

ರಾಜ್ಯಾದ್ಯಂತ ಮುಂದಿನ 6  ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ…

20 hours ago

ಹವಾಮಾನ ವರದಿ | 23-10-2024 | ಸಾಮಾನ್ಯ ಮಳೆ ಮುಂದುವರಿಕೆ | ಅ.28 ರಿಂದ ತಾಪಮಾನದ ಕಾರಣದಿಂದ ಮಳೆ ಸಾಧ್ಯತೆ |

ಅಕ್ಟೊಬರ್ 24ರಂದು ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ…

1 day ago

ಸಿರಿಧಾನ್ಯ ಕೃಷಿಯಲ್ಲಿ ಯಶಸ್ಸು | ವಾಣಿಜ್ಯ ಬೆಳೆಯಿಂದ ಹೊರಬಂದ ರೈತರು | 5 ಹಳ್ಳಿಯಲ್ಲಿ ರೈತರಿಂದ ಪ್ರಯೋಗ |

ವಾಣಿಜ್ಯ ಬೆಳೆಯಿಂದ ಹೊರಬಂದು ಸಿರಿಧಾನ್ಯ ಬೆಳೆದು ಧಾನ್ಯ ಸಂಗ್ರಹಿಸಿ, ಸಂಸ್ಕರಿಸಿ, ತಾವೇ ಬ್ರಾಂಡಿಂಗ್‌…

1 day ago