30.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಚಂಡಮಾರುತದ (ಪೆಂಗಾಲ್) ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ಶುಶ್ಕ ಹಾಗೂ ಶೀತ ಗಾಳಿ ಸೆಳೆಯಲ್ಪಡುತ್ತಿರುವುದರಿಂದ ಉತ್ತಮ ಛಳಿಯ ವಾತಾವರಣ ಸೃಷ್ಟಿಯಾಗಿದೆ. ಈ ಚಂಡಮಾರುತವು ನ. 30ರಂದು ಉತ್ತರ ತಮಿಳುನಾಡು ಕರಾವಳಿಯ ಮೂಲಕ ಭೂ ಪ್ರವೇಶಿಸುತ್ತಿದ್ದಂತೆಯೆ ರಾಜ್ಯದಲ್ಲಿ ಛಳಿಯ ವಾತಾವರಣವು ಕಡಿಮೆಯಾಗಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಡಿ.2 ಅಥವಾ 3ರಂದು ಚಂಡಮಾರುತವು ಕೇರಳದ ಕಾಸರಗೋಡು ಹಾಗೂ ಕಣ್ಣೂರು ಮಧ್ಯೆ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಈ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಇರುವಷ್ಟು ಸಮಯವೂ ( ಬಂಗಾಳಕೊಲ್ಲಿ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ) ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಸುಮಾರು ಡಿಸೆಂಬರ್ ಮೊದಲ ವಾರ ಪೂರ್ತಿ ಮಳೆಯ ಸಾಧ್ಯತೆ ಇದೆ.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…
ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ…
ಗುಜ್ಜೆ ಶೇಂಗಾ ಮಸಾಲಾ ಪಲ್ಯಕ್ಕೆ ಬೇಕಾಗುವ ವಸ್ತುಗಳು ಹಾಗೂ ಮಾಡುವ ವಿಧಾನ :…
ಅಡಿಕೆ ಮರದ ಜೊತೆಗೂ ಕಾಫಿ ಬೆಳೆ ಅನುಕೂಲಕರವಾಗಿದೆ. ಹೀಗಾಗಿ ಅಡಿಕೆ ಬೆಳೆಗಾರರು ಉಪ…