30.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಚಂಡಮಾರುತದ (ಪೆಂಗಾಲ್) ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ಶುಶ್ಕ ಹಾಗೂ ಶೀತ ಗಾಳಿ ಸೆಳೆಯಲ್ಪಡುತ್ತಿರುವುದರಿಂದ ಉತ್ತಮ ಛಳಿಯ ವಾತಾವರಣ ಸೃಷ್ಟಿಯಾಗಿದೆ. ಈ ಚಂಡಮಾರುತವು ನ. 30ರಂದು ಉತ್ತರ ತಮಿಳುನಾಡು ಕರಾವಳಿಯ ಮೂಲಕ ಭೂ ಪ್ರವೇಶಿಸುತ್ತಿದ್ದಂತೆಯೆ ರಾಜ್ಯದಲ್ಲಿ ಛಳಿಯ ವಾತಾವರಣವು ಕಡಿಮೆಯಾಗಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಡಿ.2 ಅಥವಾ 3ರಂದು ಚಂಡಮಾರುತವು ಕೇರಳದ ಕಾಸರಗೋಡು ಹಾಗೂ ಕಣ್ಣೂರು ಮಧ್ಯೆ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಈ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಇರುವಷ್ಟು ಸಮಯವೂ ( ಬಂಗಾಳಕೊಲ್ಲಿ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ) ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಸುಮಾರು ಡಿಸೆಂಬರ್ ಮೊದಲ ವಾರ ಪೂರ್ತಿ ಮಳೆಯ ಸಾಧ್ಯತೆ ಇದೆ.ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…