Advertisement
ವೆದರ್ ಮಿರರ್

ಹವಾಮಾನ ವರದಿ | 29.11.2024 | ರಾಜ್ಯದಲ್ಲಿ ಒಣಹವೆ | ಡಿಸೆಂಬರ್‌ ಮೊದಲ ವಾರ ಮಳೆ ಸಾಧ್ಯತೆ |

Share

30.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಚಂಡಮಾರುತದ (ಪೆಂಗಾಲ್) ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ಶುಶ್ಕ ಹಾಗೂ ಶೀತ ಗಾಳಿ ಸೆಳೆಯಲ್ಪಡುತ್ತಿರುವುದರಿಂದ ಉತ್ತಮ ಛಳಿಯ ವಾತಾವರಣ ಸೃಷ್ಟಿಯಾಗಿದೆ. ಈ ಚಂಡಮಾರುತವು ನ. 30ರಂದು ಉತ್ತರ ತಮಿಳುನಾಡು ಕರಾವಳಿಯ ಮೂಲಕ ಭೂ ಪ್ರವೇಶಿಸುತ್ತಿದ್ದಂತೆಯೆ ರಾಜ್ಯದಲ್ಲಿ ಛಳಿಯ ವಾತಾವರಣವು ಕಡಿಮೆಯಾಗಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

ಡಿ.2 ಅಥವಾ 3ರಂದು ಚಂಡಮಾರುತವು ಕೇರಳದ ಕಾಸರಗೋಡು ಹಾಗೂ ಕಣ್ಣೂರು ಮಧ್ಯೆ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಈ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಇರುವಷ್ಟು ಸಮಯವೂ ( ಬಂಗಾಳಕೊಲ್ಲಿ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ) ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಸುಮಾರು ಡಿಸೆಂಬರ್ ಮೊದಲ ವಾರ ಪೂರ್ತಿ ಮಳೆಯ ಸಾಧ್ಯತೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

7 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

10 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

11 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

12 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

24 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago