Advertisement
ವೆದರ್ ಮಿರರ್

ಹವಾಮಾನ ವರದಿ | 10.12.2024 | ರಾಜ್ಯದ ಕೆಲವೆಡೆ ಇಂದೂ ಮಳೆ ಸಾಧ್ಯತೆ | ಡಿ.16ರಿಂದ ವಾಯುಭಾರ ಕುಸಿತ| ಮತ್ತೆ ಮಳೆ ಸಾಧ್ಯತೆ

Share

11.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಈಗಿನಂತೆ ಡಿ. 11ರಂದು ಮಳೆಯ ಸಾಧ್ಯತೆ ಕಡಿಮೆ ಇದ್ದು, 12 ಹಾಗೂ 13ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ವಾಯುಭಾರ ಕುಸಿತದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಬಿಡುವು ಪಡೆದರೂ ಡಿ. 16ರಿಂದ ವಾಯುಭಾರ ಕುಸಿತದ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಡಿ. 12 ಹಾಗೂ 13ರಂದು ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಲಿದ್ದು, ಡಿ. 16ರಿಂದ ಇನ್ನೊಂದು ವಾಯುಭಾರ ಕುಸಿತದ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಅಲ್ಲಲ್ಲಿ ಹಗುರ ಮೋಡದ ಸಾಧ್ಯತೆಯೂ ಇದೆ. ಈಗಿನಂತೆ ಡಿ.11ರಂದು ಕರ್ನಾಟಕ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ವಾಯುಭಾರ ಕುಸಿತದ ತುಂತುರು ಮಳೆ ಆರಂಭವಾಗಿ 12 ರಂದು ದಕ್ಷಿಣ ಒಳನಾಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಕಡಮೆಯಾದರೂ ಡಿ. 16ರಿಂದ ಮತ್ತೆ ವಾಯುಭಾರ ಕುಸಿತದ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಶ್ರೀಲಂಕಾ ಬಳಿಯ ವಾಯುಭಾರ ಕುಸಿತವು ಡಿ. 11 ರಂದು ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದ್ದು, 12ರಂದು ದಕ್ಷಿಣ ಕೇರಳ ಕಡೆಗೆ ಸಾಗುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

11 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

12 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

12 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

12 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

12 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

12 hours ago