ವೆದರ್ ಮಿರರ್

ಹವಾಮಾನ ವರದಿ | 12.12.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ | ಸಂಜೆ ಸಾಮಾನ್ಯ ಮಳೆ ಸಾಧ್ಯತೆ | ಡಿ.17 ರ ನಂತರ ಕರಾವಳಿಯಲ್ಲಿ ಮತ್ತೆ ಮಳೆ ನಿರೀಕ್ಷೆ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

13.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಂಜೆ ಹಾಗೂ ಉಳಿದ ಭಾಗಗಳಲ್ಲಿ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸ್ವಲ್ಪ ಮೋಡ ಮಾತ್ರ ಇರಬಹುದು. ಈಗಿನಂತೆ ಡಿ. 13ರಂದು ಸಹ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 14ರಿಂದ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ.

ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಸಾಮಾನ್ಯ ಮಳೆ ಆರಂಭವಾಗುವ ಮುನ್ಸೂಚನೆ ಇದ್ದು, ರಾತ್ರಿಯ ತನಕ ಮುಂದುವರಿಯುವ ಸಾಧ್ಯತೆಗಳಿವೆ. ಹಾಸನ ಅಲ್ಲಲ್ಲಿ ಮಧ್ಯಾಹ್ನ ನಂತರ ಸಾಮಾನ್ಯ ಮಳೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮೋಡದ ವಾತಾವರಣ ಮತ್ತು ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿ. 13ರಿಂದ ಮಳೆ ಕಡಿಮೆಯಾಗಿ 14ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪು, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಹಾಗೂ ನಂತರ ನಿರಂತರ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಡಿ.13ರಂದು ಹಾವೇರಿ, ಧಾರವಾಡ ಸ್ವಲ್ಪ ಮಳೆಯ ಸಾಧ್ಯತೆಗಳಿದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಶ್ರೀಲಂಕಾ ಉತ್ತರ – ಪಶ್ಚಿಮ ಕರಾವಳಿಗೆ ತಲುಪಿರುವ ವಾಯುಭಾರ ಕುಸಿತವು ಅಲ್ಲಿಂದ ದಕ್ಷಿಣಾಭಿಮುಖವಾಗಿ ಚಲಿಸಿ ಶ್ರೀಲಂಕಾ ದಕ್ಷಿಣ ಕರಾವಳಿಯಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದೇ ಸಮಯದಲ್ಲಿ ದಕ್ಷಿಣ ಕೇರಳದ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿವೆ.

Advertisement
ಡಿ. 17ರಂದು ಇನ್ನೊಂದು ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಗಳಿದ್ದು, ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

1 hour ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

1 hour ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

2 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

2 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

12 hours ago