Advertisement
ವೆದರ್ ಮಿರರ್

ಹವಾಮಾನ ವರದಿ | 17.12.2024 | ರಾಜ್ಯದಲ್ಲಿ ದೂರವಾದ ಮಳೆಯ ಆತಂಕ

Share

18.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಉತ್ತರ ಭಾರತದ ಕಡೆಯಿಂದ ನೇರವಾಗಿ ಗಾಳಿ ಬೀಸುತ್ತಿರುವುದರಿಂದ ಛಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತಮಿಳುನಾಡು, ಆಂದ್ರಾ, ಒಡಿಶಾ ಕರಾವಳಿ ಮೂಲಕ ಡಿ. 21ರಂದು ಪಶ್ಚಿಮ ಬಂಗಾಳ ಕರಾವಳಿ ತಲುಪಲಿದೆ. ಆದರೆ ಸಮುದಲ್ಲೇ ಶಿಥಿಲಗೊಳ್ಳುವ ಲಕ್ಷಣಗಳಿವೆ.

ಇದರ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಗೋಚರಿತ್ತಿಲ್ಲ. ಮಳೆಯ ಆತಂಕವೂ ದೂರವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ರೈತರು, ಕೃಷಿಕರು ಬೆಳೆಕಟಾವು ಕಾರ್ಯವನ್ನು ನಿರಾತಂಕವಾಗಿ ನಡೆಸಬಹುದು.
ಆದರೆ ಡಿ. 18ರಿಂದ 3 ದಿವಸಗಳ ಕಾಲ ಬೆಂಗಳೂರು ದಕ್ಷಿಣ ಸಹಿತ ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುತ್ತಿದಂತೆಯೇ, ಅರಬ್ಬಿ ಸಮುದ್ರದ ಕಡೆಯಿಂದ ಸ್ವಲ್ಪ ಮಟ್ಟಿಗೆ ಗಾಳಿ ಸೆಳೆಯಲ್ಪಡುವುದರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಡಿ. 20ರಿಂದ ಛಳಿಯ ಪ್ರಮಾಣವು ಸ್ವಲ್ಪ ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

13 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

13 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago