18.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಉತ್ತರ ಭಾರತದ ಕಡೆಯಿಂದ ನೇರವಾಗಿ ಗಾಳಿ ಬೀಸುತ್ತಿರುವುದರಿಂದ ಛಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತಮಿಳುನಾಡು, ಆಂದ್ರಾ, ಒಡಿಶಾ ಕರಾವಳಿ ಮೂಲಕ ಡಿ. 21ರಂದು ಪಶ್ಚಿಮ ಬಂಗಾಳ ಕರಾವಳಿ ತಲುಪಲಿದೆ. ಆದರೆ ಸಮುದಲ್ಲೇ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಇದರ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಗೋಚರಿತ್ತಿಲ್ಲ. ಮಳೆಯ ಆತಂಕವೂ ದೂರವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ರೈತರು, ಕೃಷಿಕರು ಬೆಳೆಕಟಾವು ಕಾರ್ಯವನ್ನು ನಿರಾತಂಕವಾಗಿ ನಡೆಸಬಹುದು. ಆದರೆ ಡಿ. 18ರಿಂದ 3 ದಿವಸಗಳ ಕಾಲ ಬೆಂಗಳೂರು ದಕ್ಷಿಣ ಸಹಿತ ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಈ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುತ್ತಿದಂತೆಯೇ, ಅರಬ್ಬಿ ಸಮುದ್ರದ ಕಡೆಯಿಂದ ಸ್ವಲ್ಪ ಮಟ್ಟಿಗೆ ಗಾಳಿ ಸೆಳೆಯಲ್ಪಡುವುದರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಡಿ. 20ರಿಂದ ಛಳಿಯ ಪ್ರಮಾಣವು ಸ್ವಲ್ಪ ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…