ವೆದರ್ ಮಿರರ್

ಹವಾಮಾನ ವರದಿ | 21.12.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

22.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಡಿ. 24ರ ತನಕವೂ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, 25ರಿಂದ 3 ದಿವಸಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ನಂತರ ಮತ್ತೆ ನಿಧಾನವಾಗಿ ಛಳಿ ಹೆಚ್ಚಾಗುವ ನಿರೀಕ್ಷೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿ. 22ರಿಂದ ಮೋಡದ ಪ್ರಮಾಣ ಸ್ವಲ್ಪ ಜಾಸ್ತಿಯಾದರೂ ಮಳೆಯ ಸಾಧ್ಯತೆಯು ಡಿ.24ರಿಂದ ಗೋಚರಿಸುತ್ತಿದೆ. 28ರಿಂದ ಛಳಿ ಹಾಗೂ ಒಣ ಹವೆ ಆವರಿಸುವ ಲಕ್ಷಣಗಳಿವೆ.

ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ಒಂದೆರಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. (ಪಾವಗಢದ ಒಂದ ಕಡೆ ತುಂತುರು ಸಾಧ್ಯತೆ ಇದೆ). ಈಗಿನಂತೆ ಡಿ. 22ರಿಂದ ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಲ್ಲಿ ಸಾಮಾನ್ಯ ಮಳೆ ಪ್ರಾರಂಭವಾಗಿ, ಡಿ. 27ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಡಿ. 28ರಿಂದ ಒಣಹವೆ ಮುಂದುವರಿಯಲಿದೆ.

Advertisement

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಚಲನೆಯು ನಿಧಾನವಾಗಿದ್ದು, ಭೂ ಪ್ರವೇಶಿಸುವ ಸಾಧ್ಯತೆಗಳು ಕಡಿಮೆಯಾಗುತ್ತಿದೆ. ಇದರ ಪರಿಣಾಮದಿಂದ ಡಿ. 22ರಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಗಾಳಿಯು ಭೂಪ್ರವೇಶಿಸಿ ಜೊತೆಯಾಗಿ ಉತ್ತರಕ್ಕೆ ಚಲಿಸುವ ಲಕ್ಷಣಗಳಿರುವುದರಿಂದ ಛಳಿ ಕಡಿಮೆಯಾಗಿ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಟಿಯಾಗುವ ನಿರೀಕ್ಷೆ ಇದೆ. ಈ ವಾಯುಭಾರ ಕುಸಿತವು ಡಿ. 26ರಂದು ಶಿಥಿಲಗೊಳ್ಳುವ ಸಾಧ್ಯತೆಗಳಿದ್ದು, ನಂತರ ಮಳೆಯ ವಾತಾವರಣ ಬದಲಾಗಿ ಛಳಿಯ ಪ್ರಮಾಣ ನಿಧಾನವಾಗಿ ಹೆಚ್ಚಾಗುವ ನಿರೀಕ್ಷೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

49 minutes ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್…

2 days ago

ನೆಗೆಟಿವ್ ವಾತಾವರಣದಿಂದ ಮಕ್ಕಳನ್ನು ರಕ್ಷಿಸುವುದೇ ಪಾಲಕರಿಗಿರುವ ಅತಿ ದೊಡ್ಡ ಸವಾಲು

ಈಗಿನ ಹೆತ್ತವರ ಮಾತೇ ಹಾಗೆ. ನಾವು ಕಷ್ಟಪಟ್ಟಿದ್ದೇವೆ. ನಮ್ಮ ಮಕ್ಕಳು ಕಷ್ಟಪಡುವುದು ಬೇಡ.…

2 days ago