ವೆದರ್ ಮಿರರ್

ಹವಾಮಾನ ವರದಿ | 21.12.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

22.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಡಿ. 24ರ ತನಕವೂ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, 25ರಿಂದ 3 ದಿವಸಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ನಂತರ ಮತ್ತೆ ನಿಧಾನವಾಗಿ ಛಳಿ ಹೆಚ್ಚಾಗುವ ನಿರೀಕ್ಷೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿ. 22ರಿಂದ ಮೋಡದ ಪ್ರಮಾಣ ಸ್ವಲ್ಪ ಜಾಸ್ತಿಯಾದರೂ ಮಳೆಯ ಸಾಧ್ಯತೆಯು ಡಿ.24ರಿಂದ ಗೋಚರಿಸುತ್ತಿದೆ. 28ರಿಂದ ಛಳಿ ಹಾಗೂ ಒಣ ಹವೆ ಆವರಿಸುವ ಲಕ್ಷಣಗಳಿವೆ.

ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ಒಂದೆರಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. (ಪಾವಗಢದ ಒಂದ ಕಡೆ ತುಂತುರು ಸಾಧ್ಯತೆ ಇದೆ). ಈಗಿನಂತೆ ಡಿ. 22ರಿಂದ ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಲ್ಲಿ ಸಾಮಾನ್ಯ ಮಳೆ ಪ್ರಾರಂಭವಾಗಿ, ಡಿ. 27ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಡಿ. 28ರಿಂದ ಒಣಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಚಲನೆಯು ನಿಧಾನವಾಗಿದ್ದು, ಭೂ ಪ್ರವೇಶಿಸುವ ಸಾಧ್ಯತೆಗಳು ಕಡಿಮೆಯಾಗುತ್ತಿದೆ. ಇದರ ಪರಿಣಾಮದಿಂದ ಡಿ. 22ರಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಗಾಳಿಯು ಭೂಪ್ರವೇಶಿಸಿ ಜೊತೆಯಾಗಿ ಉತ್ತರಕ್ಕೆ ಚಲಿಸುವ ಲಕ್ಷಣಗಳಿರುವುದರಿಂದ ಛಳಿ ಕಡಿಮೆಯಾಗಿ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಟಿಯಾಗುವ ನಿರೀಕ್ಷೆ ಇದೆ. ಈ ವಾಯುಭಾರ ಕುಸಿತವು ಡಿ. 26ರಂದು ಶಿಥಿಲಗೊಳ್ಳುವ ಸಾಧ್ಯತೆಗಳಿದ್ದು, ನಂತರ ಮಳೆಯ ವಾತಾವರಣ ಬದಲಾಗಿ ಛಳಿಯ ಪ್ರಮಾಣ ನಿಧಾನವಾಗಿ ಹೆಚ್ಚಾಗುವ ನಿರೀಕ್ಷೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ

ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…

4 hours ago

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

10 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

10 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

11 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

11 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago