Advertisement
ವೆದರ್ ಮಿರರ್

ಹವಾಮಾನ ವರದಿ | 21.12.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ |

Share

22.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಡಿ. 24ರ ತನಕವೂ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, 25ರಿಂದ 3 ದಿವಸಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ನಂತರ ಮತ್ತೆ ನಿಧಾನವಾಗಿ ಛಳಿ ಹೆಚ್ಚಾಗುವ ನಿರೀಕ್ಷೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿ. 22ರಿಂದ ಮೋಡದ ಪ್ರಮಾಣ ಸ್ವಲ್ಪ ಜಾಸ್ತಿಯಾದರೂ ಮಳೆಯ ಸಾಧ್ಯತೆಯು ಡಿ.24ರಿಂದ ಗೋಚರಿಸುತ್ತಿದೆ. 28ರಿಂದ ಛಳಿ ಹಾಗೂ ಒಣ ಹವೆ ಆವರಿಸುವ ಲಕ್ಷಣಗಳಿವೆ.

ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ಒಂದೆರಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. (ಪಾವಗಢದ ಒಂದ ಕಡೆ ತುಂತುರು ಸಾಧ್ಯತೆ ಇದೆ). ಈಗಿನಂತೆ ಡಿ. 22ರಿಂದ ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಲ್ಲಿ ಸಾಮಾನ್ಯ ಮಳೆ ಪ್ರಾರಂಭವಾಗಿ, ಡಿ. 27ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಡಿ. 28ರಿಂದ ಒಣಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಚಲನೆಯು ನಿಧಾನವಾಗಿದ್ದು, ಭೂ ಪ್ರವೇಶಿಸುವ ಸಾಧ್ಯತೆಗಳು ಕಡಿಮೆಯಾಗುತ್ತಿದೆ. ಇದರ ಪರಿಣಾಮದಿಂದ ಡಿ. 22ರಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಗಾಳಿಯು ಭೂಪ್ರವೇಶಿಸಿ ಜೊತೆಯಾಗಿ ಉತ್ತರಕ್ಕೆ ಚಲಿಸುವ ಲಕ್ಷಣಗಳಿರುವುದರಿಂದ ಛಳಿ ಕಡಿಮೆಯಾಗಿ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಟಿಯಾಗುವ ನಿರೀಕ್ಷೆ ಇದೆ. ಈ ವಾಯುಭಾರ ಕುಸಿತವು ಡಿ. 26ರಂದು ಶಿಥಿಲಗೊಳ್ಳುವ ಸಾಧ್ಯತೆಗಳಿದ್ದು, ನಂತರ ಮಳೆಯ ವಾತಾವರಣ ಬದಲಾಗಿ ಛಳಿಯ ಪ್ರಮಾಣ ನಿಧಾನವಾಗಿ ಹೆಚ್ಚಾಗುವ ನಿರೀಕ್ಷೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 hour ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

7 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

7 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

18 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

22 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago