Advertisement
ವೆದರ್ ಮಿರರ್

ಹವಾಮಾನ ವರದಿ | 21.12.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ |

Share

22.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಡಿ. 24ರ ತನಕವೂ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, 25ರಿಂದ 3 ದಿವಸಗಳ ಕಾಲ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ನಂತರ ಮತ್ತೆ ನಿಧಾನವಾಗಿ ಛಳಿ ಹೆಚ್ಚಾಗುವ ನಿರೀಕ್ಷೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿ. 22ರಿಂದ ಮೋಡದ ಪ್ರಮಾಣ ಸ್ವಲ್ಪ ಜಾಸ್ತಿಯಾದರೂ ಮಳೆಯ ಸಾಧ್ಯತೆಯು ಡಿ.24ರಿಂದ ಗೋಚರಿಸುತ್ತಿದೆ. 28ರಿಂದ ಛಳಿ ಹಾಗೂ ಒಣ ಹವೆ ಆವರಿಸುವ ಲಕ್ಷಣಗಳಿವೆ.

ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ಒಂದೆರಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. (ಪಾವಗಢದ ಒಂದ ಕಡೆ ತುಂತುರು ಸಾಧ್ಯತೆ ಇದೆ). ಈಗಿನಂತೆ ಡಿ. 22ರಿಂದ ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಲ್ಲಿ ಸಾಮಾನ್ಯ ಮಳೆ ಪ್ರಾರಂಭವಾಗಿ, ಡಿ. 27ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಡಿ. 28ರಿಂದ ಒಣಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಚಲನೆಯು ನಿಧಾನವಾಗಿದ್ದು, ಭೂ ಪ್ರವೇಶಿಸುವ ಸಾಧ್ಯತೆಗಳು ಕಡಿಮೆಯಾಗುತ್ತಿದೆ. ಇದರ ಪರಿಣಾಮದಿಂದ ಡಿ. 22ರಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಗಾಳಿಯು ಭೂಪ್ರವೇಶಿಸಿ ಜೊತೆಯಾಗಿ ಉತ್ತರಕ್ಕೆ ಚಲಿಸುವ ಲಕ್ಷಣಗಳಿರುವುದರಿಂದ ಛಳಿ ಕಡಿಮೆಯಾಗಿ ಮೋಡ ಹಾಗೂ ಮಳೆಯ ವಾತಾವರಣ ಸೃಷ್ಟಿಯಾಗುವ ನಿರೀಕ್ಷೆ ಇದೆ. ಈ ವಾಯುಭಾರ ಕುಸಿತವು ಡಿ. 26ರಂದು ಶಿಥಿಲಗೊಳ್ಳುವ ಸಾಧ್ಯತೆಗಳಿದ್ದು, ನಂತರ ಮಳೆಯ ವಾತಾವರಣ ಬದಲಾಗಿ ಛಳಿಯ ಪ್ರಮಾಣ ನಿಧಾನವಾಗಿ ಹೆಚ್ಚಾಗುವ ನಿರೀಕ್ಷೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

3 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

11 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

11 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

2 days ago