ಹವಾಮಾನ ವರದಿ | 25.12.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ

December 25, 2024
11:52 AM

26.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಮುನ್ಸೂಚನೆ ಇದೆ. ಮಂಗಳೂರಿನ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಡಿ.28ರ ತನಕವೂ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಡಿ. 27ರಂದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿ.26ರಂದು ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿದ್ದರೆ, 27ರಂದು ಕರಾವಳಿ ಜಿಲ್ಲೆಗಳಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ರಾಜ್ಯದ ಉತ್ತರ ಹಾಗೂ ಒಳನಾಡು ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕರ್ನಾಟಕ ಹಾಗೂ ತೆಲಂಗಾಣ ಗಡಿ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ ಹಾಗೂ ಆಂದ್ರಾ ಗಡಿಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿ. 26 ಹಾಗೂ 27ರಂದು ಉತ್ತರ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದೆ.

Advertisement

ಡಿ.28ರಿಂದ ಮೋಡ ಹಾಗೂ ತುಂತುರು ಮಳೆಯ ಪ್ರಮಾಣ ಕಡಿಮೆಯಾಗಿ ಡಿ. 29 ಅಥವಾ 30ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror