ವೆದರ್ ಮಿರರ್

ಹವಾಮಾನ ವರದಿ | 25.12.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ

Share

26.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಮುನ್ಸೂಚನೆ ಇದೆ. ಮಂಗಳೂರಿನ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಡಿ.28ರ ತನಕವೂ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಡಿ. 27ರಂದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿ.26ರಂದು ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿದ್ದರೆ, 27ರಂದು ಕರಾವಳಿ ಜಿಲ್ಲೆಗಳಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ರಾಜ್ಯದ ಉತ್ತರ ಹಾಗೂ ಒಳನಾಡು ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕರ್ನಾಟಕ ಹಾಗೂ ತೆಲಂಗಾಣ ಗಡಿ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ ಹಾಗೂ ಆಂದ್ರಾ ಗಡಿಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿ. 26 ಹಾಗೂ 27ರಂದು ಉತ್ತರ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದೆ.

ಡಿ.28ರಿಂದ ಮೋಡ ಹಾಗೂ ತುಂತುರು ಮಳೆಯ ಪ್ರಮಾಣ ಕಡಿಮೆಯಾಗಿ ಡಿ. 29 ಅಥವಾ 30ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಳತೆ ಬಲ್ಲವ ಅಡುಗೆಯ ನಳಮಹಾರಾಜ…..

ಅಡುಗೆಯ ಮಾಪಕಗಳು ಒಂದೊಂದು ಮನೆಗೆ ಒಂದೊಂದು ರೀತಿ ಇರುತ್ತವೆ. ಅವುಗಳ ಕಡೆಗೆ ನಿಗಾ…

1 hour ago

ಹಿಂದೂ ಧರ್ಮ ಮತ್ತು ರಾಷ್ಟ್ರದ ಏಕತೆ

ದೇವರ ದರ್ಶನಕ್ಕೆ ಗಂಟೆಗಟ್ಟಲೆ ಕಾಯುವ ಭಕ್ತರ ದಂಡನ್ನು ನೋಡಿದಾಗ ಹಿಂದೂ ಧರ್ಮಕ್ಕೆ ಯಾವ…

2 hours ago

ಜಾನುವಾರುಗಳಿಗೆ ವಿಮಾ ಸೌಲಭ್ಯ ಯೋಜನೆ

ಕೇಂದ್ರ ಪುರಸ್ಕೃತ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಜಾನುವಾರುಗಳಿಗೆ ವಿಮಾ ಸೌಲಭ್ಯ ನೀಡುವ…

2 hours ago

ಚತುಗ್ರಹಿ ರಾಜಯೋಗ | ಚತುಗ್ರಹಿ ರಾಜಯೋಗದ ವೈಶಿಷ್ಟ್ಯಗಳು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

3 hours ago

ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸಬಾರದು | ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಸೂಚನೆ

ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ…

12 hours ago