31.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಮಧ್ಯಾಹ್ನ ನಂತರ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿ.31ರಿಂದ ಮೋಡದ ವಾತಾವರಣ ಕಡಿಮೆಯಾಗಿ ಮುಂದಿನ 10 ದಿನಗಳವರೆಗೂ ಸಾಮಾನ್ಯ ಚಳಿಯೊಂದಿಗೆ ಒಣ ಹವೆ ಮುಂದುವರಿಯಲಿದೆ.
ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನದ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿ. 31ರಿಂದ ಒಣ ಹವೆ ಮುಂದುವರಿಯಲಿದೆ.
ಉತ್ತರ ಒಳನಾಡಿನಲ್ಲಿ ಚಳಿಯೊಂದಿಗೆ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಡಿ. 31ರಿಂದ ಒಣ ಹವೆ ಮುಂದುವರಿಯಲಿದೆ.
ಉತ್ತರ ಭಾರತ ಕಡೆಯಿಂದ ದಕ್ಷಿಣದ ಕಡೆಗೆ ಚಳಿ ಗಾಳಿ ಬೀಸುತ್ತಿದ್ದರೂ, ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ರೀತಿಯ ಗಾಳಿಯ ಬೀಸುತ್ತಿರುವ ಕಾರಣದಿಂದ ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚಳಿ ಕಡಿಮೆಯಾಗಿ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಉಂಟಾಗಿದೆ.
ಡಿ.31ರಿಂದ ಮೋಡದ ವಾತಾವರಣ ಕಡಿಮೆಯಾದರೂ, ದಕ್ಷಿಣ ಕರ್ನಾಟಕದಲ್ಲಿ ಮುಂದಿನ ಮೂರು, ನಾಲ್ಕು ದಿನಗಳ ಕಾಲ ಸಾಮಾನ್ಯ ಚಳಿ ಮುಂದುವರಿಯುವ ಲಕ್ಷಣಗಳಿವೆ.
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…