15.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಈಗ ಅರಬ್ಬಿ ಸಮುದ್ರಲ್ಲಿರುವ ವಾಯುಭಾರ ಕುಸಿತವು ಸ್ವಲ್ಪ ದುರ್ಬಲಗೊಂಡು ಪಶ್ಚಿಮದ ಕಡೆ ಚಲಿಸುತ್ತಿದೆ.
ದಕ್ಷಿಣ ಕನ್ನಡದ ಸುಳ್ಯ, ಪುತ್ತೂರು, ವಿಟ್ಲ, ಬೆಳ್ತಂಗಡಿ, ಬಂಟ್ವಾಳ ಹಾಗೂ ಮಂಗಳೂರು ಭಾಗಗಳಲ್ಲಿ ಸಂಜೆಯ ವೇಳೆಗೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು, ಮಂಜೇಶ್ವರ, ಮುಳ್ಳೇರಿಯ, ಬದಿಯಡ್ಕ, ಮಡಿಕೇರಿ, ಆಗುಂಬೆ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ತುಮಕೂರು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆಯ ವೇಳೆಗೆ ಮೋಡದ ವಾತಾವರಣ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel