16.3.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಡಿಕೇರಿ, ಮೈಸೂರು, ಮೂಡಿಗೆರೆ, ಶೃಂಗೇರಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಬೆಳ್ತಂಗಡಿ, ಸುಳ್ಯ, ಸುಬ್ರಹ್ಮಣ್ಯ, ಪುತ್ತೂರು, ಹಾಗೂ ಕಾಸರಗೋಡು ಭಾಗಗಳಲ್ಲಿ ಸಹ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನ ಪ್ರಕಾರ ಮಾರ್ಚ್ 21 ರಿಂದ 23ರ ತನಕ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಹಾಗೂ ಕೇರಳಾದಾದ್ಯಂತ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಆದರೆ ಇನ್ನೂ ಸಮಯ ಇರುವುದರಿಂದ ಬದಲಾವಣೆ ಇರಬಹುದು. ಆಯಾ ದಿವಸಗಳ ಮುನ್ಸೂಚನೆ ತಿಳಿಸಲಾಗುವುದು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel