2022ರ ಮಾರ್ಚ್ 3 ರಂದು ಅಂದರೆ ಕಳೆದ ವರ್ಷ ಬಂಗಾಳಕೊಲ್ಲಿಯಲ್ಲಿ ಪ್ರಭಲ ವಾಯುಭಾರ ಕುಸಿತ ಉಂಟಾದರೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ತುಂತುರು ಮಳೆ ಮಾತ್ರ ಆಗಿತ್ತು. ಮಾರ್ಚ್ 19, 20 ರಿಂದ ಸುಬ್ರಹ್ಮಣ್ಯ, ಸುಳ್ಯ, ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ ಆರಂಭವಾಗಿತ್ತು.
ಆದರೆ, ವರ್ಷ ಅಂತಹ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಈಗ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯು ನಮ್ಮ ಒಳನಾಡು, ಮಲೆನಾಡು, ಕರಾವಳಿ ಭಾಗಗಳಿಗೆ ತಲಪುವಾಗ ಬಿಸಿಲಿನ ಪ್ರಭಾವದಿಂದ (ಮೋಡವಿಲ್ಲದ್ದರಿಂದ) ಶುಷ್ಕಗೊಂಡು ಉಷ್ಣತೆ ಇನ್ನಷ್ಟು ಹೆಚ್ಚಿಸುತ್ತಿದೆ.
ಅರಬ್ಬಿ ಸಮುದ್ರದ ಕಡೆಯಿಂದ ಗಾಳಿ ಬೀಸಲು ಆರಂಭಿಸದ ಹೊರತು ವಾತಾವರಣದಲ್ಲಿ ತೇವಾಂಶ ಕೊರತೆ ಮುಂದುವರಿಯಲಿದೆ ಹಾಗೂ ಮಳೆಯ ಸಾಧ್ಯತೆಯೂ ಕ್ಷೀಣಿಸುತ್ತಿದೆ. ಹೀಗಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದರೆ ಪಶ್ಚಿಮದ ಕಡೆ ಬೀಸುವ ಗಾಳಿಯ ಪ್ರಭಾವ ಕಡಿಮೆಯಾಗಬಹುದು. ಅದಿಲ್ಲದಿದ್ದರೆ ರಾಜ್ಯದಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಬಹುದು.
ಗುಜರಾತ್ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಇವತ್ತು, ನಾಳೆಯಿಂದ ಮೋಡ, ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಇದರ ಪ್ರಭಾವ ಕರ್ನಾಟಕದ ಕರಾವಳಿ ಭಾಗಗಳಿಗೂ ಉಂಟಾದರೆ ವಾತಾವರಣ ಬದಲಾಗಬಹುದು. ವಾತಾವರಣದಲ್ಲಿ ತೇವಾಂಶ ಉಂಟಾಗಿ ಹಗಲಿನ ಉಷ್ಣಾಂಶ ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು. ಆದರೆ, ಈಗಿನ ವಿದ್ಯಮಾನ ಪ್ರಕಾರ ಇವತ್ತಿನಿಂದ ರಾಜ್ಯದ ಕರಾವಳಿ ತೀರ ಭಾಗಗಳಲ್ಲಿ ಪಶ್ಚಿಮ ಹಾಗೂ ಪೂರ್ವದ ಗಾಳಿಯು ಸಂಧಿಸಲಿರುವುದರಿಂದ ಕರಾವಳಿ ತೀರ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾಗಬಹುದು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…