Advertisement
ವೆದರ್ ಮಿರರ್

ವೆದರ್‌ ಮಿರರ್‌ | ಕರಾವಳಿ ತೀರ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾಗಲು ಕಾರಣ ಏನು ?

Share

2022ರ ಮಾರ್ಚ್ 3 ರಂದು ಅಂದರೆ ಕಳೆದ ವರ್ಷ ಬಂಗಾಳಕೊಲ್ಲಿಯಲ್ಲಿ ಪ್ರಭಲ ವಾಯುಭಾರ ಕುಸಿತ ಉಂಟಾದರೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ತುಂತುರು ಮಳೆ ಮಾತ್ರ ಆಗಿತ್ತು. ಮಾರ್ಚ್ 19, 20 ರಿಂದ ಸುಬ್ರಹ್ಮಣ್ಯ, ಸುಳ್ಯ, ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ ಆರಂಭವಾಗಿತ್ತು.

ಆದರೆ, ವರ್ಷ ಅಂತಹ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಈಗ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯು ನಮ್ಮ ಒಳನಾಡು, ಮಲೆನಾಡು, ಕರಾವಳಿ ಭಾಗಗಳಿಗೆ ತಲಪುವಾಗ ಬಿಸಿಲಿನ ಪ್ರಭಾವದಿಂದ (ಮೋಡವಿಲ್ಲದ್ದರಿಂದ) ಶುಷ್ಕಗೊಂಡು ಉಷ್ಣತೆ ಇನ್ನಷ್ಟು ಹೆಚ್ಚಿಸುತ್ತಿದೆ.

ಅರಬ್ಬಿ ಸಮುದ್ರದ ಕಡೆಯಿಂದ ಗಾಳಿ ಬೀಸಲು ಆರಂಭಿಸದ ಹೊರತು ವಾತಾವರಣದಲ್ಲಿ ತೇವಾಂಶ ಕೊರತೆ ಮುಂದುವರಿಯಲಿದೆ ಹಾಗೂ ಮಳೆಯ ಸಾಧ್ಯತೆಯೂ ಕ್ಷೀಣಿಸುತ್ತಿದೆ. ಹೀಗಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದರೆ ಪಶ್ಚಿಮದ ಕಡೆ ಬೀಸುವ ಗಾಳಿಯ ಪ್ರಭಾವ ಕಡಿಮೆಯಾಗಬಹುದು. ಅದಿಲ್ಲದಿದ್ದರೆ ರಾಜ್ಯದಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಬಹುದು.

ಗುಜರಾತ್ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಇವತ್ತು, ನಾಳೆಯಿಂದ ಮೋಡ, ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಇದರ ಪ್ರಭಾವ ಕರ್ನಾಟಕದ ಕರಾವಳಿ ಭಾಗಗಳಿಗೂ ಉಂಟಾದರೆ ವಾತಾವರಣ ಬದಲಾಗಬಹುದು. ವಾತಾವರಣದಲ್ಲಿ ತೇವಾಂಶ ಉಂಟಾಗಿ ಹಗಲಿನ ಉಷ್ಣಾಂಶ ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು. ಆದರೆ, ಈಗಿನ ವಿದ್ಯಮಾನ ಪ್ರಕಾರ ಇವತ್ತಿನಿಂದ ರಾಜ್ಯದ ಕರಾವಳಿ ತೀರ ಭಾಗಗಳಲ್ಲಿ ಪಶ್ಚಿಮ ಹಾಗೂ ಪೂರ್ವದ ಗಾಳಿಯು ಸಂಧಿಸಲಿರುವುದರಿಂದ ಕರಾವಳಿ ತೀರ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

6 minutes ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

3 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

9 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

15 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

15 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

24 hours ago