Advertisement
ವೆದರ್ ಮಿರರ್

ವೆದರ್‌ ಮಿರರ್‌ | ಕರಾವಳಿ ತೀರ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾಗಲು ಕಾರಣ ಏನು ?

Share

2022ರ ಮಾರ್ಚ್ 3 ರಂದು ಅಂದರೆ ಕಳೆದ ವರ್ಷ ಬಂಗಾಳಕೊಲ್ಲಿಯಲ್ಲಿ ಪ್ರಭಲ ವಾಯುಭಾರ ಕುಸಿತ ಉಂಟಾದರೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ತುಂತುರು ಮಳೆ ಮಾತ್ರ ಆಗಿತ್ತು. ಮಾರ್ಚ್ 19, 20 ರಿಂದ ಸುಬ್ರಹ್ಮಣ್ಯ, ಸುಳ್ಯ, ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ ಆರಂಭವಾಗಿತ್ತು.

ಆದರೆ, ವರ್ಷ ಅಂತಹ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಈಗ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯು ನಮ್ಮ ಒಳನಾಡು, ಮಲೆನಾಡು, ಕರಾವಳಿ ಭಾಗಗಳಿಗೆ ತಲಪುವಾಗ ಬಿಸಿಲಿನ ಪ್ರಭಾವದಿಂದ (ಮೋಡವಿಲ್ಲದ್ದರಿಂದ) ಶುಷ್ಕಗೊಂಡು ಉಷ್ಣತೆ ಇನ್ನಷ್ಟು ಹೆಚ್ಚಿಸುತ್ತಿದೆ.

ಅರಬ್ಬಿ ಸಮುದ್ರದ ಕಡೆಯಿಂದ ಗಾಳಿ ಬೀಸಲು ಆರಂಭಿಸದ ಹೊರತು ವಾತಾವರಣದಲ್ಲಿ ತೇವಾಂಶ ಕೊರತೆ ಮುಂದುವರಿಯಲಿದೆ ಹಾಗೂ ಮಳೆಯ ಸಾಧ್ಯತೆಯೂ ಕ್ಷೀಣಿಸುತ್ತಿದೆ. ಹೀಗಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದರೆ ಪಶ್ಚಿಮದ ಕಡೆ ಬೀಸುವ ಗಾಳಿಯ ಪ್ರಭಾವ ಕಡಿಮೆಯಾಗಬಹುದು. ಅದಿಲ್ಲದಿದ್ದರೆ ರಾಜ್ಯದಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಬಹುದು.

ಗುಜರಾತ್ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಇವತ್ತು, ನಾಳೆಯಿಂದ ಮೋಡ, ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಇದರ ಪ್ರಭಾವ ಕರ್ನಾಟಕದ ಕರಾವಳಿ ಭಾಗಗಳಿಗೂ ಉಂಟಾದರೆ ವಾತಾವರಣ ಬದಲಾಗಬಹುದು. ವಾತಾವರಣದಲ್ಲಿ ತೇವಾಂಶ ಉಂಟಾಗಿ ಹಗಲಿನ ಉಷ್ಣಾಂಶ ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು. ಆದರೆ, ಈಗಿನ ವಿದ್ಯಮಾನ ಪ್ರಕಾರ ಇವತ್ತಿನಿಂದ ರಾಜ್ಯದ ಕರಾವಳಿ ತೀರ ಭಾಗಗಳಲ್ಲಿ ಪಶ್ಚಿಮ ಹಾಗೂ ಪೂರ್ವದ ಗಾಳಿಯು ಸಂಧಿಸಲಿರುವುದರಿಂದ ಕರಾವಳಿ ತೀರ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

3 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

7 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

8 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

17 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago