ವೆದರ್‌ ಮಿರರ್‌ | 14-03-2023 | ಕರಾವಳಿ ಜಿಲ್ಲೆಗಳಾದ್ಯಂತ ಮೋಡದ ವಾತಾವರಣ | ತಡರಾತ್ರಿ ತುಂತುರು ಮಳೆ ಸಾಧ್ಯತೆ | ಮಾ.15 ರಿಂದ ರಾಜ್ಯದ ಹಲವು ಕಡೆ ಮಳೆ ನಿರೀಕ್ಷೆ |

March 14, 2023
1:13 PM

15.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ತಡರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ತಡರಾತ್ರಿ ಒಂದೆರಡು ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಸಂಜೆ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ವಾತಾವರಣದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ತೇವಾಂಶ ಇಲ್ಲದಿರುವುದರಿಂದ ಸ್ಥಳೀಯವಾಗಿ ಮೋಡ ಉತ್ಪತ್ತಿಯಾಗುತ್ತಿಲ್ಲ. ತೇವಾಂಶ ಗರಿಷ್ಠ ಉಷ್ಣತೆಯಲ್ಲಿ ಸಹ 50, 55%ರಿಂದ ಮೇಲ್ಪಟ್ಟು ಇದ್ದರೆ ಮಳೆ ಮೋಡಗಳು ಹುಟ್ಟಲು ಅನುಕೂಲವಾಗುತ್ತದೆ

ಈಗಿನ ಮುನ್ಸೂಚನೆಯಂತೆ ಮಾರ್ಚ್ 15 ಹಾಗೂ 16 ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಮಾರ್ಚ್ 18,19ರ ತನಕ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror