ವೆದರ್‌ ಮಿರರ್‌ | 30-05-2023 | ಇಂದೂ ಸುಳ್ಯ,ಸುಬ್ರಹ್ಮಣ್ಯ ಪ್ರದೇಶಗಳಲ್ಲಿ ಮಳೆ….ಮಳೆ | ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದ ಲಕ್ಷಣ |

May 30, 2023
12:33 PM

31.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಡುಪಿ ಕರಾವಳಿಯ ಅಲ್ಲಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ, ಕೋಲಾರ, ಬೆಂಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಒಂದೆರಡು ಕಡೆ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಹೆಚ್ಚಿನ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ ತಾಪಮಾನ ಏರಿಕೆಯಿಂದ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಗಾಳಿಯ ಬಗ್ಗೆ ಎಚ್ಚರವಿರಲಿ.

ಮುಂಗಾರು ಸ್ಥಿತಿ : ಅರಬ್ಬಿ ಸಮುದ್ರದಲ್ಲಿ ಇದ್ದಕ್ಕಿದ್ದಂತೆ ಮುಂಗಾರಿಗೆ ಪೂರಕವಾದ ಗಾಳಿಯ ಚಟುವಟಿಕೆಗಳು ಸಮರ್ಪಕವಾಗಿ ಇಲ್ಲದಿರುವುದು ಈಗಿನ ಪೂರ್ವದ ಮಳೆಗೆ ಅನುಕೂಲವಾಗಿದೆ. ಇದರಿಂದ ಮುಂಗಾರು ತಡವಾಗುವ ಆತಂಕವಿದೆ. ಈಗಿನ ಪ್ರಕಾರ ಜೂನ್ 5ರ ಅಂದಾಜು ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ ಮುಂಗಾರು ಚುರುಕಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror