27.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ದಿನವಿಡೀ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಜೋರಿರಬಹುದು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ ಭಾಗಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಮುಂಗಾರು ರಾಜ್ಯದಾದ್ಯಂತ ಉತ್ತಮ ಸ್ಥಿತಿಯಲ್ಲಿದ್ದು ಜುಲೈ 28ರಿಂದ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಜುಲೈ 30ರ ತನಕ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಇದ್ದರೆ ನಂತರ ಮತ್ತಷ್ಟು ದುರ್ಬಲಗೊಳ್ಳವ ಸಾಧ್ಯತೆ ಇದೆ.
ಒಡಿಶಾ, ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಇವತ್ತು ಸಂಜೆ ಶಿಥಿಲಗೊಳ್ಳುವ ಲಕ್ಷಣಗಳಿವೆ.
ರಾಜ್ಯದಲ್ಲಿ ತಮಿಳುನಾಡು ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ…
ಜಾಗತಿಕ ನೈಸರ್ಗಿಕ ರಬ್ಬರ್ ಉತ್ಪಾದನೆಯು ಶೇಕಡಾ 35 ರಷ್ಟು ಬೆಳೆದಿದೆ, ಆದರೆ ಬೇಡಿಕೆಯು…
ಕೋಲಾರ ಜಿಲ್ಲೆಯ 9 ಮಂದಿ ರೈತರು ಕೇಂದ್ರ ಸರ್ಕಾರದಿಂದ ಸಹಾಯಧನದೊಂದಿಗೆ ಸೌರ ವಿದ್ಯುತ್…
ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದ ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರದ ನವರಾತ್ರಿ ಉತ್ಸವ…
ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸಾಮಿ…
ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ,ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ…