30.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಹೆಚ್ಚಿರಬಹುದು. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಹ ಒಂದೆರಡು ಮಳೆ ಹೆಚ್ಚಿರಬಹುದು.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ದುರ್ಬಲವಾಗಿದ್ದು, ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ತೀರಾ ಕಡಿಮೆ. ಕರಾವಳಿ ಭಾಗಗಳಲ್ಲಿ ಆ. 6 ರ ತನಕ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…