26.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಆಗುಂಬೆ ಹಾಗೂ ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಹೆಚ್ಚಿದೆ.ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಈಗಿನ ಪ್ರಕಾರ ಸೆಪ್ಟೆಂಬರ್ 3ನೇ ವಾರದಲ್ಲಿ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಬಹುದು. ಅಕ್ಟೊಬರ್ 2ನೇ ವಾರದಲ್ಲಿ ಹಿಂಗಾರು ಮಳೆಯ ಪ್ರವೇಶದ ಲಕ್ಷಣಗಳಿವೆ. ಜನವರಿಯ ಮಧ್ಯ ಅಥವಾ ಕೊನೇಯ ತನಕವೂ ಹಿಂಗಾರು ಮುಂದುವರಿಯುವ ಸಾಧ್ಯತೆ ಇದೆ. ಒಂದು ಮಾಹಿತಿಯಂತೆ ಹಿಂಗಾರು ಸಹ ಸಾಮಾನ್ಯಕ್ಕಿಂತ ಕಡಿಮೆ ಇರುವ ಸಾಧ್ಯತೆ ತೋರುತ್ತಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…