29.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರಿನ ಒಂದೆರಡು ಕಡೆ, ಚಾಮರಾಜನಗರ ಒಂದೆರಡು ಕಡೆ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಕಲಬುರ್ಗಿ, ಬೀದರ್ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬಳ್ಳಾರಿ, ಹಾವೇರಿಯ ಒಂದೆರಡು ಕಡೆ, ಬೆಳಗಾವಿ ಸೇರಿದಂತೆ ಕರ್ನಾಟಕ – ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಕಡೆ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಗೋವಾ ಕರಾವಳಿಯಿಂದ ಸ್ವಲ್ಪ ಮೇಲೆ ಮಲ್ವಾನ್ ಕಡಲ ತೀರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು , ಇದರ ಪ್ರಭಾವದಿಂದ ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಸೆಪ್ಟೆಂಬರ್ 30ರಂದು ಶಿಥಿಲಗೊಳ್ಳುವ ಸಾಧ್ಯತೆ ಇದ್ದು. ಒಕ್ಟೊಬರ್ 1ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ. ಜೊತೆಗೆ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಒಕ್ಟೊಬರ್ ಮೊದಲ ವಾರದಲ್ಲಿ ಸಂಪೂರ್ಣ ಹಿಂದೆ ಸರಿಯುವ ಸಾಧ್ಯತೆ ಇದೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…