ವೆದರ್ ಮಿರರ್

#WeatherMirror | 04-10-2023 | ಹಿಂದೆ ಸರಿದ ಮುಂಗಾರು | ಅಕ್ಟೊಬರ್ 8 ರಿಂದ ಗುಡುಗು ಸಹಿತ ಮಳೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

05.0.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಂಜೆ ಅಲ್ಲಲ್ಲಿ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಕೊಡಗು ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ನಡುವೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು ಅಲ್ಲಲ್ಲಿ ಹಾಗೂ ಶಿವಮೊಗ್ಗ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ ಹಾಗೂ ಉತ್ತರ ಕನ್ನಡ ಗಡಿ ಭಾಗಗಳಲ್ಲಿ, ದಾವಣಗೆರೆ ದಕ್ಷಿಣ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ತುಮಕೂರು, ಪಾವಗಡ, ಉಳಿದ ದಾವಣಗೆರೆ ಭಾಗಗಳಲ್ಲಿ ಮೋಡದೊಂದಿಗೆ ಗುಡುಗು ಸಹಿತ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿದಿದ್ದು, ವಾತಾವರಣದ ತೇವಾಂಶ ಹಾಗೂ ಅಧಿಕ ತಾಪಮಾನದ ಕಾರಣದಿಂದ ಹಿಂಗಾರು ಆರಂಭವಾಗುವ ಮೊದಲೇ ದಕ್ಷಿಣ ಕನ್ನಡ, ಉಡುಪಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಅಕ್ಟೊಬರ್ 8 ರಿಂದ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

2 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

6 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

8 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

9 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

9 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

10 hours ago