ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

May 17, 2024
2:44 PM
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ ಇದು ಪರಿಣಾಮ ಬೀರುತ್ತಿದೆ.

ಹವಾಮಾನ ವಿಷಯವು ಯಾವುದೇ ಚುನಾವಣೆ ವಿಷಯ ಆಗುವುದಿಲ್ಲ. ಏಕೆಂದರೆ ಇದರಿಂದ ಓಟು ಬರುವುದಿಲ್ಲ..!. ಹಾಗೆಂದು ಕಾದ ಭೂಮಿಗೆ ರೆಡ್‌ ಎಲರ್ಟ್‌ ನೀಡುತ್ತಲೇ ಇದ್ದಾರೆ ಹವಾಮಾನ ತಜ್ಞರು. ಇಡೀ ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಮಾಡಲು ಮಾತುಕತೆಗಳು ನಡೆದಿವೆ. ಆದರೂ ನಿಯಂತ್ರಣಕ್ಕೆ ಬಾರದ ವ್ಯವಸ್ಥೆಯಲ್ಲಿ ಮತ್ತೆ ಮತ್ತೆ ಕೈಕೊಡುತ್ತಿದೆ ಹವಾಮಾನ.ಪರಿಣಾಮ ಏನು..?

ಭೂಮಿಯು ವಿವಿಧ ಸಂಕಷ್ಟಗಳನ್ನು ಎದುರಿಸುತ್ತಿದೆ. ಜಗತ್ತು ಉಳಿಯಬೇಕಾದರೆ ಕೆಲವು ನಿಯಂತ್ರಣಗಳು ಆಗಲೇಬೇಕು. ಇದಕ್ಕಾಗಿ ಕಟ್ಟುನಿಟ್ಟಿನ ಕ್ರಮ ಆಗಲೇಬೇಕು. ಏಕೆಂದರೆ ಅಪಾಯ ಹತ್ತಿರದಲ್ಲಿಯೇ ಇದೆ.  ಕಳೆದ ವರ್ಷದ ತಾಪಮಾನವು, ಜಾಗತಿಕ ಶಾಖದ ದಾಖಲೆಯನ್ನೇ ಬ್ರೇಕ್ ಮಾಡಿದೆ ಎಂಬ ಆತಂಕಕಾರಿ ವಿಚಾರವನ್ನು ಯುಎನ್ ಈಚೆಗೆ ದೃಢಪಡಿಸಿದೆ. ವಿಶ್ವಸಂಸ್ಥೆಯ ವಿಶ್ವ ಹವಾಮಾನ ಸಂಸ್ಥೆಯು ತನ್ನ ವಾರ್ಷಿಕ ಹವಾಮಾನ ವರದಿಯನ್ನು ಬಿಡುಗಡೆ ಮಾಡಿತು. ‘2023’ ಇದುವರೆಗೆ ದಾಖಲಾದ ಅತ್ಯಂತ ಬಿಸಿಯಾದ ವರ್ಷ ಎಂದು ತಿಳಿಸಿದೆ. ಶಾಖದ ಅಲೆಗಳು ಸಾಗರಗಳಲ್ಲಿ ಹೆಚ್ಚುತ್ತಿದೆ. ಹಿಮನದಿಗಳು ದಾಖಲೆಯ ಪ್ರಮಾಣದಲ್ಲಿ ಕರಗಿ ಹರಿಯುತ್ತಿವೆ. ನಮ್ಮ ಭೂಮಿ ಅಳವಿನಂಚಿನಲ್ಲಿದೆ ಎಂದು ಯುಎನ್ ಮುಖ್ಯಸ್ಥ ಆಂಟೋನಿಯೊ ಗುಟೆರಸ್ ಆತಂಕ ವ್ಯಕ್ತಪಡಿಸಿದ್ದಾರೆ. ಬದಲಾವಣೆಗಳು ವೇಗಗೊಳ್ಳುತ್ತಿವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅಪಾಯಕಾರಿ 1.5 ಡಿಗ್ರಿ ಸೆಲ್ಸಿಯಸ್ ಮಟ್ಟಕ್ಕೆ ಹತ್ತಿರ : ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ 2015 ರಲ್ಲಿ ‘ಪ್ಯಾರಿಸ್ ಒಪ್ಪಂದ’ವಾಗಿತ್ತು. ಅದರಲ್ಲಿ ಹೇಳಿರುವಂತೆ 1850 ರಿಂದ 1900 ರ ವರೆಗಿನ ಅವಧಿಯಲ್ಲಿ ದಾಖಲಾದ ತಾಪಮಾನದ ಸರಾಸರಿಗಿಂತ ಎರಡು ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆ ಮಾಡುವ ಗುರಿ ಹೊಂದಲಾಗಿತ್ತು. ಇಷ್ಟಾದರೂ, ಕನಿಷ್ಠಪಕ್ಷ 1.5 ಡಿಗ್ರಿ ಸೆಲ್ಸಿಯನಷ್ಟು ಕಡಿಮೆ ಮಾಡಬೇಕು ಎಂಬ ಆಶಯ ಹೊಂದಲಾಗಿತ್ತು. ಆದರೆ ಈಗಿನ ಹವಾಮಾನ ಬದಲಾವಣೆ ಗಮನಿಸಿದರೆ, 1.5 ಡಿಗ್ರಿಗೆ ಅಪಾಯಕಾರಿ ಹತ್ತಿರದಲ್ಲಿದೆ. ಕಳೆದ ವರ್ಷ ಕೈಗಾರಿಕಾ ಪೂರ್ವದ ಮಟ್ಟಕ್ಕಿಂತ ಸರಾಸರಿ ಮೇಲ್ಮೈ ತಾಪಮಾನವು 1.45 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು ಎಂದು ಡಬ್ಲ್ಯೂಎಂಒ ತಿಳಿಸಿದೆ. ಅಲ್ಲದೇ, ಪ್ಯಾರಿಸ್ ಒಪ್ಪಂದದ 1.5 ಡಿಗ್ರಿ ಸೆಲ್ಸಿಯಸ್ ಮಿತಿಗೆ ಭೂಮಿ ತಾಪಮಾನ ಯಾವಾಗಲೂ ಹತ್ತಿರ ಇರಲಿಲ್ಲ ಎಂದು ಸ್ಪಷ್ಟಪಡಿಸಿದೆ.

ಏರುತ್ತಲೇ ಇದೆ ತಾಪಮಾನ : ಕಳೆದ ವರ್ಷ ಸಮುದ್ರದ ಶಾಖದ ಅಲೆಗಳು ಜಾಗತಿಕ ಸಾಗರದ ಸುಮಾರು ಮೂರನೇ ಒಂದು ಭಾಗವನ್ನು ಆವರಿಸಿವೆ ಎಂಬ ವಿಚಾರ ಸಂಶೋಧನೆಯಿಂದ ಬಹಿರಂಗವಾಗಿದೆ. 2023 ರ ಅಂತ್ಯದ ವೇಳೆಗೆ ಸಮುದ್ರದ 90 ಪ್ರತಿಶತಕ್ಕಿಂತಲೂ ಹೆಚ್ಚಿನ ಭಾಗವು ಶಾಖದ ಅಲೆ ಪರಿಣಾಮವನ್ನು ಅನುಭವಿಸಿದೆ. ಈ ಶಾಖದ ಅಲೆಗಳು ಸಮುದ್ರ ಪರಿಸರ ವ್ಯವಸ್ಥೆ ಮತ್ತು ಹವಳದ ಬಂಡೆಗಳ ಮೇಲೆ ಪರಿಣಾಮ ಬೀರುತ್ತಿವೆ. ವಿಶ್ವದಲ್ಲೇ ಪ್ರಮುಖ ಹಿಮನದಿಗಳಿರುವ ಪಶ್ಚಿಮ ಉತ್ತರ ಅಮೆರಿಕ ಮತ್ತು ಯೂರೋಪ್ ಎರಡರಲ್ಲೂ ತೀವ್ರವಾದ ಕರಗುವಿಕೆ ಉಂಟಾಗುತ್ತಿದೆ. ಆಲ್ಫೆನ್ಸ್ ಹಿಮನದಿಗಳು ಕಳೆದ 2 ವರ್ಷಗಳಲ್ಲಿ ಶೇ.10 ಕಳೆದುಕೊಂಡಿದೆ. ಅಂಟಾರ್ಕ್ಟಿಕ್ ಸಮುದ್ರದ ಮಂಜುಗಡ್ಡೆಯು ದಾಖಲೆ ಪ್ರಮಾಣದಲ್ಲಿ ಕರಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸಾಗರ ತಾಪಮಾನವೂ ಹೆಚ್ಚುತ್ತಿದೆ. ಈ ಬೆಳವಣಿಗೆಯಿಂದಾಗಿ ಸಮುದ್ರ ಮಟ್ಟ ಏರುತ್ತಿದೆ. ಕಳೆದ ದಶಕದಲ್ಲಿ (2014-2023) ಜಾಗತಿಕ ಸರಾಸರಿ ಸಮುದ್ರ ಮಟ್ಟ ಏರಿಕೆಯು, ಮೊದಲ ದಶಕದಲ್ಲಿನ ಉಪಗ್ರಹ ದಾಖಲೆಗಳ ಪ್ರಮಾಣಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ ಎಂದು ಡಬ್ಲ್ಯೂಎಂಒ ಸಂಸ್ಥೆ ತಿಳಿಸಿದೆ.

ಹವಾಮಾನ ಬದಲಾವಣೆಯು ಜಗತ್ತಿನಾದ್ಯಂತ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಒಂದೆಡೆ ಪ್ರವಾಹ ಮತ್ತೊಂದೆಡೆ ಬರ ಪರಿಸ್ಥಿತಿ ಕಾಣಿಸಿಕೊಳ್ಳುತ್ತಿದೆ. ಗುಳೆ ಹೋಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಜೀವವೈವಿಧ್ಯ ನಶಿಸಿ ಹೋಗುತ್ತಿದೆ. ಆಹಾರ ಅಭದ್ರತೆ ಹೆಚ್ಚಾಗುತ್ತಿದೆ. ಹವಾಮಾನ ಬಿಕ್ಕಟ್ಟು ಮಾನವೀಯತೆ ಎದುರಿಸುತ್ತಿರುವ ಸವಾಲಾಗಿದೆ. ಅಸಮಾನತೆಯ ಬಿಕ್ಕಟ್ಟಿನೊಂದಿಗೆ ಇದು ನಿಕಟ ಸಂಬಂಧ ಹೊಂದಿದೆ.

ಹವಾಮಾನ ಸಂಕಷ್ಟ-ಆಹಾರ ಬಿಕ್ಕಟ್ಟು ಹವಾಮಾನ ಸಂಕಷ್ಟವು ಭೂಮಿಯ ಮೇಲೆ ವಿವಿಧ ಪರಿಣಾಮ ಬೀರುತ್ತದೆ. ಅದರಲ್ಲೂ ಕೃಷಿಯ ಮೇಲೆ ಮೊದಲ ಗಂಭೀರ ಪರಿಣಾಮ ಬೀರುತ್ತಿದೆ. ಹೀಗಾಗಿ ಈಗಾಗಲೇ ಪ್ರಪಂಚದಾದ್ಯಂತ ಜನರನ್ನು ತೀವ್ರವಾಗಿ ಆಹಾರ ಬಿಕ್ಕಟ್ಟು ಕಾಡುತ್ತಿದೆ. ಕೋವಿಡ್ ಸಾಂಕ್ರಾಮಿಕದ ಮೊದಲು ಆಹಾರ ಅಸುರಕ್ಷಿತ ಬಾಧಿತ ಜನರ ಸಂಖ್ಯೆಯು 14.90 ಕೋಟಿಯಷ್ಟಿತ್ತು. 2023 ರ ಕೊನೆಯಲ್ಲಿ ಅದು 33.03 ಕೋಟಿಗೆ ದ್ವಿಗುಣಗೊಂಡಿದೆ.

ಭರವಸೆಯ ಬೆಳಕು : ಹವಾಮಾನ ಬದಲಾವಣೆ ಪರಿಣಾಮ ತಗ್ಗಿಸಲು ಯುಎನ್‌ನ ಹವಾಮಾನ ಮತ್ತು ಹವಾಮಾನ ಏಜೆನ್ಸಿಯು ಭರವಸೆಯೊಂದನ್ನು ವ್ಯಕ್ತಪಡಿಸಿದೆ. ನವೀಕರಿಸಬಹುದಾದ ಶಕ್ತಿ ಉತ್ಪಾದನೆಯನ್ನು ಹೆಚ್ಚಿಸುತ್ತಿದೆ. ಕಳೆದ ವರ್ಷ ನವೀಕರಿಸಬಹುದಾದ ಇಂಧನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿದೆ. ಸೌರ, ಗಾಳಿ ಮತ್ತು ಜಲವಿದ್ಯುತ್‌ನಿಂದ 2022 ರಿಂದ ಸುಮಾರು 50% ನಷ್ಟು ಉತ್ಪಾದನೆಯು ಹೆಚ್ಚಾಗಿದೆ ಎಂದು ಡಬ್ಲ್ಯೂಎಂಒ ಮಾಹಿತಿ ನೀಡಿದೆ.ಿದರ ಜೊತೆಗೆ ಭೂಮಿಯ ದೀರ್ಘಾವಧಿಯ ಉಷ್ಣತೆಯ ಏರಿಕೆಯನ್ನು 1.5 ಡಿಗ್ರಿ ಸೆಲ್ಸಿಯಸ್ ಮಿತಿಗಿಂತ ಕೆಳಗಿರಿಸಲು ಸತತ ಪ್ರಯತ್ನ ನಡೆಯಬೇಕಿದೆ.

ಮಾಹಿತಿ ಮೂಲ : ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror