22.7.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕರ್ನಾಟಕ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಇಂದು ತಡ ರಾತ್ರಿ ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಉಂಟಾಗುವ ವಾಯುಭಾರ ಕುಸಿತವು ನಿರೀಕ್ಷೆಗಿಂತ ಕಡಿಮೆ ಪ್ರಭಲವಾಗಿರುವ ಸಾಧ್ಯತೆ ಇದೆ ಮತ್ತು 22ನೇ ತಾರೀಕು ರಾತ್ರಿ ಶಿಥಿಲಗೊಳ್ಳುವ ಮುನ್ಸೂಚನೆ ಇದೆ. ಕರ್ನಾಟಕಕ್ಕೆ ಅಷೇನು ಪರಿಣಾಮಗಳು ಕಾಣಿಸುತ್ತಿಲ್ಲ.
ಈಗಿನ ಮಳೆಯ ವಾತಾವರಣವು ಕರಾವಳಿ ಭಾಗಗಳಲ್ಲಿ 27ರ ವರೆಗೆ ಮುಂದುವರಿಯುವ ಸಾಧ್ಯತೆ ಇದ್ದು, ಆಮೇಲೆ ಕಡಿಮೆ ಆಗುವ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel