ಬೆಳಗಿನ ಚಳಿ ಹಾಗೂ ಹಿಮ ನೋಡಿ ಹಿರಿಯರು ಹೇಳುವುದು ಹೀಗೆ…ಮಳೆ ದೂರವಾಯ್ತಾ ?. ಕಳೆದ ಅನೇಕ ದಿನಗಳ ಮಳೆಗೆ ಕೊಂಚ ವಿರಾಮ ಸಿಕ್ಕಿದೆ. ಬುಧವಾರ ಬೆಳಗ್ಗೆ ಮಲೆನಾಡು ಭಾಗದ ಹಲವು ಕಡೆಗಳಲ್ಲಿ ಮಂಜು ಮಸುಕಿದ ವಾತಾವರಣ ಕಂಡುಬಂದಿದೆ. ಮಳೆಯೂ ಕಳೆದ ಮೂರ್ನಾಕು ದಿನಗಳಿಂದ ದೂರವಾಗಿದೆ. ಮಂಜು ಬೀಳಲು ಆರಂಭದವಾದರೆ ಮಳೆ ದೂರವಾಗುತ್ತದೆ ಎನ್ನುವುದು ಹಿರಿಯರು ಹೇಳುವ ಮಾತು, ಆದರೆ ಹವಾಮಾನ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದಂತೆ ಆಗುಂಬೆ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಕಲಬುರ್ಗಿ, ಬೀದರ್ ಹಾಗೂ ಗುಲ್ಬರ್ಗ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ತುಮಕೂರು, ಹಾಸನ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಮೊದಲಾದ ಕಡೆ ಮಳೆ ಮುನ್ಸೂಚನೆ ಇದೆ.
ಆ.27 ರ ಬಳಿಕ 30 ರವರೆಗೆ ಕೇರಳದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…