ಬೆಳಗಿನ ಚಳಿ ಹಾಗೂ ಹಿಮ ನೋಡಿ ಹಿರಿಯರು ಹೇಳುವುದು ಹೀಗೆ…ಮಳೆ ದೂರವಾಯ್ತಾ ?. ಕಳೆದ ಅನೇಕ ದಿನಗಳ ಮಳೆಗೆ ಕೊಂಚ ವಿರಾಮ ಸಿಕ್ಕಿದೆ. ಬುಧವಾರ ಬೆಳಗ್ಗೆ ಮಲೆನಾಡು ಭಾಗದ ಹಲವು ಕಡೆಗಳಲ್ಲಿ ಮಂಜು ಮಸುಕಿದ ವಾತಾವರಣ ಕಂಡುಬಂದಿದೆ. ಮಳೆಯೂ ಕಳೆದ ಮೂರ್ನಾಕು ದಿನಗಳಿಂದ ದೂರವಾಗಿದೆ. ಮಂಜು ಬೀಳಲು ಆರಂಭದವಾದರೆ ಮಳೆ ದೂರವಾಗುತ್ತದೆ ಎನ್ನುವುದು ಹಿರಿಯರು ಹೇಳುವ ಮಾತು, ಆದರೆ ಹವಾಮಾನ ಮಾಹಿತಿ ಪ್ರಕಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದಂತೆ ಆಗುಂಬೆ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಕಲಬುರ್ಗಿ, ಬೀದರ್ ಹಾಗೂ ಗುಲ್ಬರ್ಗ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ತುಮಕೂರು, ಹಾಸನ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಮೊದಲಾದ ಕಡೆ ಮಳೆ ಮುನ್ಸೂಚನೆ ಇದೆ.
ಆ.27 ರ ಬಳಿಕ 30 ರವರೆಗೆ ಕೇರಳದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…