ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಹೆಚ್ಚಾಗುತ್ತಿದೆ. ಹೀಗಾಗಿ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳ ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿ ಮಾರ್ಚ್ 20 ರ ಬೆಳಗಿನ ವೇಳೆಗೆ ವಾಯುಭಾರ ಕುಸಿತಗಳು ಹೆಚ್ಚಾಗಿ ಮಾರ್ಚ್ 21 ರಂದು ಸೈಕ್ಲೋನಿಕ್ ಚಂಡಮಾರುತವಾಗಿ ತೀವ್ರಗೊಂಡು “ಅಸನಿ” ಚಂಡಮಾರುತ ಕಾಣಿಸಿಕೊಳ್ಳಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಬಾರಿಯ ಚಂಡಮಾರುತಕ್ಕೆ ಅಂದರೆ ವರ್ಷದ ಮೊದಲ ಚಂಡಮಾರುತಕ್ಕೆ ಶ್ರೀಲಂಕಾ ಅಸನಿ ಎಂದು ಹೆಸರಿಟ್ಟಿದೆ.
ಮಾರ್ಚ್ 20 ಮತ್ತು ಮಾರ್ಚ್ 21ರಂದು ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆಯಿದೆ. ಸೈಕ್ಲೋನಿಕ್ ಚಂಡಮಾರುತವು ಮಾರ್ಚ್ 22 ರವರೆಗೆ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತದೆ. ಮಾರ್ಚ್ 23 ರಂದು ದಿಕ್ಕು ಬದಲಿಸಲಿರುವ ಚಂಡಮಾರುತ ಬಾಂಗ್ಲಾದೇಶ ಮತ್ತು ಉತ್ತರ ಮ್ಯಾನ್ಮಾರ್ನ ಪಕ್ಕದ ಪ್ರದೇಶಗಳ ಕಡೆ ಚಲಿಸಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರತದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…
ರೈಲ್ವೆ ಇಲಾಖೆ ಪ್ರಯಾಗ್ರಾಜ್ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಮ್ಯಾನ್ಮಾರ್ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…
ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ…