ಮಳೆಗಾಲ ಮರೆಯಾಗುವ ಕಾಲ ಬಂದಾಗಿದೆ. ಹಿಂಗಾರು ಮಳೆ ಸುರಿಯಬೇಕಾದ ಕಾಲ ಬಂದಾಗಿದೆ. ಆದರೆ ಈ ವರ್ಷ ಇನ್ನೂ ಮುಂಗಾರು ದೂರವಾಗಿಲ್ಲ. ಅದರಲ್ಲೂ ಕರಾವಳಿ ಪ್ರದೇಶದಲ್ಲಿ ಮಳೆಯಬ್ಬರ ಇನ್ನೂ ಇದೆ. ಹವಾಮಾನ ಇಲಾಖೆ ಪ್ರಕಾರ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸೆ.15 ರಿಂದ ಮೂರು ದಿನಗಳ ಕಾಲ ವ್ಯಾಪಕ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರಿನ ಅಬ್ಬರ ಕಡಿಮೆಯಾಗುತ್ತಿದೆ. ಆದರೆ ಕರಾವಳಿ ಭಾಗದಲ್ಲಿ ಇನ್ನೂ ಮುಂಗಾರು ಮಳೆ ಕಡಿಮೆಯಾಗಿಲ್ಲ. ಇದೀಗ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆ.15 ರಿಂದ ಭಾರಿ ಮಳೆ ಮುಂದುವರಿಯಲಿದೆ. ಮಂಗಳವಾರ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿ ತೀರದಲ್ಲಿ ಗಾಳಿಯ ತೀವ್ರತೆಯೂ ಹೆಚ್ಚಿರಲಿದ್ದು ಗಂಟೆ 55 ಕಿಮೀವರೆಗೂ ಇರಬಹುದು.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…