ಮಳೆಗಾಲ ಮರೆಯಾಗುವ ಕಾಲ ಬಂದಾಗಿದೆ. ಹಿಂಗಾರು ಮಳೆ ಸುರಿಯಬೇಕಾದ ಕಾಲ ಬಂದಾಗಿದೆ. ಆದರೆ ಈ ವರ್ಷ ಇನ್ನೂ ಮುಂಗಾರು ದೂರವಾಗಿಲ್ಲ. ಅದರಲ್ಲೂ ಕರಾವಳಿ ಪ್ರದೇಶದಲ್ಲಿ ಮಳೆಯಬ್ಬರ ಇನ್ನೂ ಇದೆ. ಹವಾಮಾನ ಇಲಾಖೆ ಪ್ರಕಾರ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸೆ.15 ರಿಂದ ಮೂರು ದಿನಗಳ ಕಾಲ ವ್ಯಾಪಕ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರಿನ ಅಬ್ಬರ ಕಡಿಮೆಯಾಗುತ್ತಿದೆ. ಆದರೆ ಕರಾವಳಿ ಭಾಗದಲ್ಲಿ ಇನ್ನೂ ಮುಂಗಾರು ಮಳೆ ಕಡಿಮೆಯಾಗಿಲ್ಲ. ಇದೀಗ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆ.15 ರಿಂದ ಭಾರಿ ಮಳೆ ಮುಂದುವರಿಯಲಿದೆ. ಮಂಗಳವಾರ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿ ತೀರದಲ್ಲಿ ಗಾಳಿಯ ತೀವ್ರತೆಯೂ ಹೆಚ್ಚಿರಲಿದ್ದು ಗಂಟೆ 55 ಕಿಮೀವರೆಗೂ ಇರಬಹುದು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…