ಮಳೆಗಾಲ ಮರೆಯಾಗುವ ಕಾಲ ಬಂದಾಗಿದೆ. ಹಿಂಗಾರು ಮಳೆ ಸುರಿಯಬೇಕಾದ ಕಾಲ ಬಂದಾಗಿದೆ. ಆದರೆ ಈ ವರ್ಷ ಇನ್ನೂ ಮುಂಗಾರು ದೂರವಾಗಿಲ್ಲ. ಅದರಲ್ಲೂ ಕರಾವಳಿ ಪ್ರದೇಶದಲ್ಲಿ ಮಳೆಯಬ್ಬರ ಇನ್ನೂ ಇದೆ. ಹವಾಮಾನ ಇಲಾಖೆ ಪ್ರಕಾರ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸೆ.15 ರಿಂದ ಮೂರು ದಿನಗಳ ಕಾಲ ವ್ಯಾಪಕ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರಿನ ಅಬ್ಬರ ಕಡಿಮೆಯಾಗುತ್ತಿದೆ. ಆದರೆ ಕರಾವಳಿ ಭಾಗದಲ್ಲಿ ಇನ್ನೂ ಮುಂಗಾರು ಮಳೆ ಕಡಿಮೆಯಾಗಿಲ್ಲ. ಇದೀಗ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆ.15 ರಿಂದ ಭಾರಿ ಮಳೆ ಮುಂದುವರಿಯಲಿದೆ. ಮಂಗಳವಾರ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿ ತೀರದಲ್ಲಿ ಗಾಳಿಯ ತೀವ್ರತೆಯೂ ಹೆಚ್ಚಿರಲಿದ್ದು ಗಂಟೆ 55 ಕಿಮೀವರೆಗೂ ಇರಬಹುದು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…