ಮಳೆಗಾಲ ಮರೆಯಾಗುವ ಕಾಲ ಬಂದಾಗಿದೆ. ಹಿಂಗಾರು ಮಳೆ ಸುರಿಯಬೇಕಾದ ಕಾಲ ಬಂದಾಗಿದೆ. ಆದರೆ ಈ ವರ್ಷ ಇನ್ನೂ ಮುಂಗಾರು ದೂರವಾಗಿಲ್ಲ. ಅದರಲ್ಲೂ ಕರಾವಳಿ ಪ್ರದೇಶದಲ್ಲಿ ಮಳೆಯಬ್ಬರ ಇನ್ನೂ ಇದೆ. ಹವಾಮಾನ ಇಲಾಖೆ ಪ್ರಕಾರ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸೆ.15 ರಿಂದ ಮೂರು ದಿನಗಳ ಕಾಲ ವ್ಯಾಪಕ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರಿನ ಅಬ್ಬರ ಕಡಿಮೆಯಾಗುತ್ತಿದೆ. ಆದರೆ ಕರಾವಳಿ ಭಾಗದಲ್ಲಿ ಇನ್ನೂ ಮುಂಗಾರು ಮಳೆ ಕಡಿಮೆಯಾಗಿಲ್ಲ. ಇದೀಗ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆ.15 ರಿಂದ ಭಾರಿ ಮಳೆ ಮುಂದುವರಿಯಲಿದೆ. ಮಂಗಳವಾರ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿ ತೀರದಲ್ಲಿ ಗಾಳಿಯ ತೀವ್ರತೆಯೂ ಹೆಚ್ಚಿರಲಿದ್ದು ಗಂಟೆ 55 ಕಿಮೀವರೆಗೂ ಇರಬಹುದು.
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…