ರಾಜ್ಯದಲ್ಲಿ ಚಳಿ ಮುಂದುವರಿದಿದೆ. ಈ ನಡುವೆಯೇ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಲಕ್ಷಣ ಇರುವುದರಿಂದ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಕರ್ನಾಟಕ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದರಲ್ಲಿ ಉತ್ತರ ಒಳನಾಡನ್ನು ಹೊರತುಪಡಿಸಿ ಉಳಿದ ಕಡೆ ಅಧಿಕ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕಳೆದ ವಾರದಿಂದ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು, ತಮಿಳುನಾಡಿನ ಚೆನ್ನೈ, ಪುದುಚೇರಿಯಲ್ಲಿ ಮಳೆಯಾಗುತ್ತಿದೆ. ಇನ್ನೂ 2 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel