Advertisement
ಸುದ್ದಿಗಳು

ಹವಾಮಾನ | ಬೆಳಗ್ಗೆಯೇ ಶುರುವಾಯಿತು ಗುಡುಗು | ಸುಬ್ರಹ್ಮಣ್ಯ ಸುತ್ತಮುತ್ತ ಇಂದೂ ಮಳೆ ನಿರೀಕ್ಷೆ |

Share

ಕರಾವಳಿ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ವಾತಾವರಣ ಕಂಡುಬರಲಿದೆ. ಆದರೆ ಸುಬ್ರಹ್ಮಣ್ಯ ˌ ಬೆಳ್ತಂಗಡಿ ಸುತ್ತಮುತ್ತ ಸಾಧಾರಣ ಮಳೆ ಬರುವ ಸಂಭವ ಇದೆ. ಸುಳ್ಯ ಪುತ್ತೂರು ತಾಲೂಕಿನ ಕೆಲವೆಡೆ ತುಂತುರು ಮಳೆಯಾಗಬಹುದು. ಉಳಿದ ಪ್ರದೇಶಗಳಲ್ಲಿ ಮಳೆ ಸಾಧ್ಯತೆ ಇಲ್ಲ. ಕರಾವಳಿಯಾದ್ಯಂತ ರಾತ್ರಿ ಮೋಡವಿರಬಹುದು. ಸುಬ್ರಹ್ಮಣ್ಯ ಆಸುಪಾಸಿನ ಕೊಲ್ಲಮೊಗ್ರ, ಕಲ್ಲಾಜೆ, ಸೇರಿದಂತೆ ಹಲವು ಕಡೆ ಬೆಳಗ್ಗೆಯೇ ಗುಡುಗು ಆರಂಭವಾಗಿದೆ.

Advertisement
Advertisement
ಕೊಡಗು, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕುದುರೆಮುಖ, ಚಿಕ್ಕಮಗಳೂರು, ಉತ್ತಮ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಮೋಡದೊಂದಿಗೆ ಒಂದೆರಡು ಕಡೆ ( ಮುಳ್ಳೇರಿಯ, ಈಶ್ವರಮಂಗಲ ಸುತ್ತಮುತ್ತ) ತುಂತುರು  ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಹಾಗೂ ಉಡುಪಿ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಗಾಳಿ ಮಹತ್ವದ ಪಾತ್ರ ವಹಿಸಲಿದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಮಾತ್ರ ಇರಬಹುದು.
ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಉಳಿದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಇವತ್ತಿನಿಂದ ಕೇರಳ ಅರಬ್ಬಿ ಸಮುದ್ರ ಕಡೆಯಿಂದಲೂ ಮೋಡಗಳು ಕಾಣಿಸಿಕೊಳ್ಳಲಿದ್ದು ದಕ್ಷಿಣ ಹಾಗೂ ಮಧ್ಯ ಕೇರಳ ಕರಾವಳಿಯ ಹಲವೆಡೆ ಮಳೆಯ ಮುನ್ಸೂಚನೆ ಇದೆ.  ಇನ್ನೆರಡು ದಿನಗಳಲ್ಲಿ ಕಾಸರಗೋಡು ಹಾಗೂ ದಕ್ಷಿಣದ ಕರಾವಳಿಯಲ್ಲೂ ಮಳೆಯ ಸಾಧ್ಯತೆ ಇದೆ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.09.2024 | ರಾಜ್ಯದಲ್ಲಿ ಮತ್ತೆ ಕೆಲವು ಕಡೆ ಮಳೆ ಸಾಧ್ಯತೆ

23.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

11 hours ago

ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರತಿಯೊಬ್ಬ ರೈತರಿಗೂ ಬೆಳೆ ಪರಿಹಾರಕ್ಕೆ ಸೂಚನೆ |

ಬೆಳಗಾವಿ ಜಿಲ್ಲೆಯಲ್ಲಿ ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರತಿಯೊಬ್ಬ ರೈತರಿಗೂ ಬೆಳೆ ಪರಿಹಾರ ಒದಗಿಸಬೇಕು. ಜಂಟಿ…

1 day ago

ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲ

ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಕೆಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ…

1 day ago

ಪ್ಲಾಸ್ಟಿಕ್ ಪೆಟ್, ಬಾಟಲ್ ಗಳ ಬಳಕೆ ನಿಷೇಧ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಪೆಟ್ ಮತ್ತು ಬಾಟಲ್…

1 day ago

ಅಭಿವೃದ್ಧಿಯಾಗದ ಎರಡು ತಾಲೂಕು ಸಂಪರ್ಕದ ಗ್ರಾಮೀಣ ರಸ್ತೆ | ಪ್ರಧಾನಿ ಕಚೇರಿವರೆಗೂ ತಲಪಿತ್ತು ಬೇಡಿಕೆ | ನೂತನ ಸಂಸದರಿಗೂ ಮನವಿ |

ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಬೆಸೆಯುವ ಪರ್ಲಿಕಜೆ-ಮಾವಿನಕಟ್ಟೆ ರಸ್ತೆ ಅಭಿವೃದ್ಧಿಗಾಗಿ ಎರಡು ದಶಕಗಳಿಂದ…

1 day ago

ಹವಾಮಾನ ವರದಿ | 21-09-2024 | ನಾಳೆಯಿಂದ ಮಳೆ ಜಾಸ್ತಿಯಾಗುವ ನಿರೀಕ್ಷೆ |

ಸೆಪ್ಟೆಂಬರ್ 22ರಿಂದ ಮಳೆ ಸ್ವಲ್ಪ ಜಾಸ್ತಿ ಆಗುವ ಲಕ್ಷಣಗಳಿದ್ದು ಮುಂದಿನ 5 ಅಥವಾ…

2 days ago