ಹವಾಮಾನ ವರದಿ | 09-10-2024 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಸಾಧ್ಯತೆ

October 9, 2024
12:27 PM
ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ. ಮಧ್ಯ ಒಂದೆರಡು ದಿನ ಕಡಿಮೆ ಇರಬಹುದು. ಇನ್ನು ಮೇಘ ಸ್ಪೋಟದಂತಹ ಮಳೆಯ ಸಾಧ್ಯತೆ ಕಡಿಮೆಯಾಗಬಹುದು.

10.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಜಾಸ್ತಿ ಇದ್ದರೆ, ದಕ್ಷಿಣ ಕನ್ನಡದ ಸುಳ್ಯ, ಕಡಬ ಭಾಗಗಳಲ್ಲಿ ಕಡಿಮೆ ಇರಬಹುದು. ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ. ಮಧ್ಯ ಒಂದೆರಡು ದಿನ ಕಡಿಮೆ ಇರಬಹುದು. ಇನ್ನು ಮೇಘ ಸ್ಪೋಟದಂತಹ ಮಳೆಯ ಸಾಧ್ಯತೆ ಕಡಿಮೆಯಾಗಬಹುದು.

Advertisement

ಮಲೆನಾಡು : ಕೊಡಗು ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಗುಡುಗು ಮಳೆಯ ಮುನ್ಸೂಚನೆ ಇದೆ. ಮಧ್ಯ ಒಂದೆರಡು ದಿನ ಕಡಿಮೆ ಇರಬಹುದು.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಗುಡುಗು ಮಳೆಯ ಮುನ್ಸೂಚನೆ ಇದೆ.

Advertisement

ಅರಬ್ಬಿ ಸಮುದ್ರದ ದಕ್ಷಿಣ ಕರಾವಳಿ ಭಾಗದಲ್ಲಿ ಉಂಟಾದ ವಾಯುಭಾರ ಕುಸಿತವು ಅಕ್ಟೊಬರ್ 12 ರ ಸುಮಾರಿಗೆ ಪಶ್ಚಿಮಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಅದು ಆ ಕಡೆ ಚಲಿಸುತ್ತಿದ್ದಂತೆಯೇ ರಾಜ್ಯದಲ್ಲಿ ಹಿಂಗಾರು ಆರಂಭವಾಗುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 18-10-2024 | ಅ.25ರಿಂದ ಮಳೆಯ ಕಡಿಮೆಯಾಗುವ ಲಕ್ಷಣ
October 18, 2024
9:29 PM
by: ಸಾಯಿಶೇಖರ್ ಕರಿಕಳ
ತುಮಕೂರು ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ | 20 ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ಹಬ್
October 18, 2024
9:14 PM
by: The Rural Mirror ಸುದ್ದಿಜಾಲ
ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಸಿರಿಧಾನ್ಯ ಖರೀದಿ
October 18, 2024
9:04 PM
by: The Rural Mirror ಸುದ್ದಿಜಾಲ
ದೀಪಾವಳಿ ಹಬ್ಬಕ್ಕಾಗಿ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ
October 18, 2024
8:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror