Advertisement
ಸುದ್ದಿಗಳು

ಹವಾಮಾನ ವರದಿ | 23-12-2024 | ಕೆಲವು ಕಡೆ ಮೋಡ-ಕೆಲವು ಕಡೆ ತುಂತುರು ಮಳೆ | ಜನವರಿಯಲ್ಲಿ ಮಳೆಯ ಲಕ್ಷಣವಿಲ್ಲ |

Share

24.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿ ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಈ ವಾತಾವರಣವು ಡಿಸೆಂಬರ್ 27ರ ತನಕ ಮುಂದುವರಿದು 28ರಿಂದ ಬಿಸಿಲಿನ ಅವಧಿ ಹೆಚ್ಚಿರಬಹುದು.

ಮಲೆನಾಡು : ಮಲೆನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಡಿಸೆಂಬರ್ 27ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, 28 ರಿಂದ ಒಣಹವೆ ಆವರಿಸುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 26 ಹಾಗೂ 27ರಂದು ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿದ್ದು, 28ರಿಂದ ಒಣಹವೆ ಆವರಿಸುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಡಿ.26 ರಂದು ತಮಿಳುನಾಡು ಕರಾವಳಿಯ ಬಳಿ ಶಿಥಿಲಗೊಳ್ಳುತ್ತಿದ್ದಂತೆಯೇ ಹಿಂಗಾರು ರೀತಿಯ ಗಾಳಿಯ ಚಲನೆಯಿಂದ ರಾಜ್ಯದಲ್ಲಿ ಡಿಸೆಂಬರ್ 26  ರಿಂದ 2 ದಿವಸಗಳ ಕಾಲ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಚಳಿಯ ಪ್ರಮಾಣವು ಹೆಚ್ಚಾಗುವ ಸಾಧ್ಯತೆಗಳಿದ್ದು ಒಣಹವೆ ಆವರಿಸುವ ಲಕ್ಷಣಗಳಿವೆ.
2025 ರ ಜನವರಿಯಲ್ಲಿ ಮಳೆಯ ಲಕ್ಷಣಗಳಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

5 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago