ಹವಾಮಾನ ವರದಿ | 12-01-2025 | ಚಳಿ ಕಡಿಮೆ-ಮೋಡದ ವಾತಾವರಣ | ದ ಕ ಜಿಲ್ಲೆಯಲ್ಲಿ ತುಂತುರು ಮಳೆ ಸಾಧ್ಯತೆ |

January 12, 2025
5:06 PM
ಶ್ರೀಲಂಕಾ ಬಳಿಯ ತಿರುವಿಕೆಯ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಚಳಿ ಕಡಿಮೆಯಾಗಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ವಾತಾವರಣ ಸೃಷ್ಠಿಯಾಗಿದೆ.

13.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದಾದ್ಯಂತ ಚಳಿ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣವು ಕಡಿಮೆಯಾಗಿದ್ದು, ಸಂಜೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಜನವರಿ 14 ರಂದು ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಡುಪಿ ಮೋಡ ಮಾತ್ರ ಇರಬಹುದು. ಆಮೇಲೆ 2 ದಿನಗಳ ಕಾಲ ಸ್ವಲ್ಪ ಮೋಡದ ವಾತಾವರಣದ ಸಾಧ್ಯತೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನದ ಒಂದೆರಡು ಕಡೆ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಜನವರಿ 14ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ನಂತರ 2 ದಿವಸಗಳ ಕಾಲ ಸ್ವಲ್ಪ ಮೋಡದ ವಾತಾವರಣ ಇರಬಹುದು.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಛಳಿ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಜನವರಿ 13ರಂದು ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ದಕ್ಷಿಣ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆಮೇಲೆ ಮುಂದಿನ 2 ಅಥವಾ 3 ದಿನಗಳ ಕಾಲ ಸ್ವಲ್ಪ ಮೋಡದ ವಾತಾವರಣ ಇರಬಹುದು.

ಶ್ರೀಲಂಕಾ ಬಳಿಯ ತಿರುವಿಕೆಯ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಚಳಿ ಕಡಿಮೆಯಾಗಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ವಾತಾವರಣ ಸೃಷ್ಠಿಯಾಗಿದೆ.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |
June 3, 2025
11:08 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ
June 3, 2025
11:01 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ
June 3, 2025
9:55 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |
June 3, 2025
9:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group