Advertisement
ವೆದರ್ ಮಿರರ್

ಹವಾಮಾನ ವರದಿ | 12-01-2025 | ಚಳಿ ಕಡಿಮೆ-ಮೋಡದ ವಾತಾವರಣ | ದ ಕ ಜಿಲ್ಲೆಯಲ್ಲಿ ತುಂತುರು ಮಳೆ ಸಾಧ್ಯತೆ |

Share

13.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದಾದ್ಯಂತ ಚಳಿ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣವು ಕಡಿಮೆಯಾಗಿದ್ದು, ಸಂಜೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಜನವರಿ 14 ರಂದು ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಡುಪಿ ಮೋಡ ಮಾತ್ರ ಇರಬಹುದು. ಆಮೇಲೆ 2 ದಿನಗಳ ಕಾಲ ಸ್ವಲ್ಪ ಮೋಡದ ವಾತಾವರಣದ ಸಾಧ್ಯತೆ ಇದೆ.

Advertisement

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನದ ಒಂದೆರಡು ಕಡೆ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಜನವರಿ 14ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ನಂತರ 2 ದಿವಸಗಳ ಕಾಲ ಸ್ವಲ್ಪ ಮೋಡದ ವಾತಾವರಣ ಇರಬಹುದು.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಛಳಿ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಜನವರಿ 13ರಂದು ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ದಕ್ಷಿಣ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆಮೇಲೆ ಮುಂದಿನ 2 ಅಥವಾ 3 ದಿನಗಳ ಕಾಲ ಸ್ವಲ್ಪ ಮೋಡದ ವಾತಾವರಣ ಇರಬಹುದು.

Advertisement

ಶ್ರೀಲಂಕಾ ಬಳಿಯ ತಿರುವಿಕೆಯ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಚಳಿ ಕಡಿಮೆಯಾಗಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ವಾತಾವರಣ ಸೃಷ್ಠಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆಯ ಸಂಶೋಧನೆಗೆ ಆಯುರ್ವೇದ ಕಾಲೇಜು ಸ್ಥಾಪನೆಗೆ ಒತ್ತಾಯ

ಸರ್ಕಾರಿ ಆಯುರ್ವೇದ ಕಾಲೇಜು ಸ್ಥಾಪನೆಯಾದರೆ ಅಡಿಕೆಯ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗಬಹುದು. ಅಲ್ಲದೆ, ಸಾಂಪ್ರದಾಯಿಕ…

1 hour ago

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಅವಧಿ ವಿಸ್ತರಣೆ

ರೈತರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಖರೀದಿಯ ಕಾಲಮಿತಿ ಹೆಚ್ಚಿಸುವಂತೆ   ಕೇಂದ್ರ ಕೃಷಿ ಸಚಿವರಲ್ಲಿ…

2 hours ago

ದಾವಣಗೆರೆ | ಅಂತರ್ಜಲ ಬಳಕೆಗೆ ನಿರಾಪೇಕ್ಷಣಾ ಪತ್ರ ಕಡ್ಡಾಯ

ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ…

2 hours ago

ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದಲ್ಲಿ ಅನುಷ್ಠಾನ ಸಾಧ್ಯವಿಲ್ಲ : ಡಾ.ಪುರುಷೋತ್ತಮ ಬಿಳಿಮಲೆ

ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದರೆ, ಆದೇಶಗಳಿಂದ ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು…

10 hours ago

ಸೀತೆ ಪುನೀತೆ | ಅಪೂರ್ಣ ರಾಮಾಯಣ

ರಾಮನು ಸೀತೆಯನ್ನು ಪರಿತ್ಯಜಿಸಿದ್ದು ಸರಿಯೆ? ಅರಣ್ಯದಲ್ಲಿ ಸೀತೆ ಏನಾದಳು? ಅವಳ ಮನಸ್ಸಿಗೆ ಎಂತಹ…

11 hours ago

ಮಾವಿನ ನಂತರ  ಬಾಳೆಯು ಪ್ರಮುಖ ಹಣ್ಣಿನ ಬೆಳೆ

ಬಾಳೆಯು ಮಾವಿನ ನಂತರ ನಮ್ಮ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಭಾರತ ದೇಶವು…

2 days ago