13.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದಾದ್ಯಂತ ಚಳಿ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣವು ಕಡಿಮೆಯಾಗಿದ್ದು, ಸಂಜೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಜನವರಿ 14 ರಂದು ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಡುಪಿ ಮೋಡ ಮಾತ್ರ ಇರಬಹುದು. ಆಮೇಲೆ 2 ದಿನಗಳ ಕಾಲ ಸ್ವಲ್ಪ ಮೋಡದ ವಾತಾವರಣದ ಸಾಧ್ಯತೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಹಾಸನದ ಒಂದೆರಡು ಕಡೆ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಜನವರಿ 14ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ನಂತರ 2 ದಿವಸಗಳ ಕಾಲ ಸ್ವಲ್ಪ ಮೋಡದ ವಾತಾವರಣ ಇರಬಹುದು.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಛಳಿ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿದ್ದು, ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಜನವರಿ 13ರಂದು ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ದಕ್ಷಿಣ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆಮೇಲೆ ಮುಂದಿನ 2 ಅಥವಾ 3 ದಿನಗಳ ಕಾಲ ಸ್ವಲ್ಪ ಮೋಡದ ವಾತಾವರಣ ಇರಬಹುದು.
ಶ್ರೀಲಂಕಾ ಬಳಿಯ ತಿರುವಿಕೆಯ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಚಳಿ ಕಡಿಮೆಯಾಗಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ವಾತಾವರಣ ಸೃಷ್ಠಿಯಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…