ವೆದರ್ ಮಿರರ್

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

16.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಇಲ್ಲಿ ಗಾಳಿಯ ಪಾತ್ರ ಮಹತ್ವದ ಪಾತ್ರ ವಹಿಸಲಿದೆ. ಈಗಿನಂತೆ ಎಪ್ರಿಲ್ 19ರ ತನಕ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಕಾಣಿಸುತ್ತಿಲ್ಲ. ಎ.20 ರಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ ತುಂತುರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಬಾಳೆಹೊನ್ನೂರು, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಎಪ್ರಿಲ್ 16 ರಿಂದ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿದ್ದರೂ ಉತ್ತಮ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಎಪ್ರಿಲ್ 19 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡಿನಲ್ಲೂ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಎಪ್ರಿಲ್ 19 ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಎಪ್ರಿಲ್ 21 ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿ ವಲಯದಲ್ಲಿ ರೈತ ಕಲ್ಯಾಣಕ್ಕೆ ಒತ್ತು | ರಾಷ್ಟ್ರ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ

ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…

2 minutes ago

ಕೃಷಿಯಲ್ಲಿ ದೂರ ಶಿಕ್ಷಣ ಕುರಿತ ಕಾರ್ಯಗಾರ

ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…

5 minutes ago

ಈ ರಾಶಿಗಳ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ ಆಷಾಢ ಮಾಸದಲ್ಲಿ

ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 minutes ago

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ನಷ್ಟ ಪರಿಹಾರ ಸಿಗಲಿದೆ

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…

8 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಮಯೂರ.ಕೆ

ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…

10 hours ago

ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?

ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…

11 hours ago