Advertisement
ವೆದರ್ ಮಿರರ್

ಹವಾಮಾನ ವರದಿ | 18.04.2025 | ಕೆಲವು ಸೀಮಿತ ಪ್ರದೇಶದಲ್ಲಿ ಮಳೆ | ಎ.21ರಿಂದ ಮಳೆ ಹೆಚ್ಚಾಗುವ ಸಾಧ್ಯತೆ

Share
19.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಕೆಲವು ಸೀಮಿತ ಪ್ರದೇಶಗಳಲ್ಲಿ ಸಂಜೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಈಗಿನಂತೆ ಎ. 21ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.  ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಗಾಳಿಯ ಪ್ರಮಾಣ ಹೆಚ್ಚಿದ್ದರೆ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.  ಈಗಿನಂತೆ ಮಲೆನಾಡು ಭಾಗಗಳಲ್ಲಿ ಸಂಜೆಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಧಾರವಾಡ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದ್ದು, ಪ್ರಮಾಣ ಹೆಚ್ಚಿದ್ದರೆ, ಕೊಪ್ಪಳ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ದಕ್ಷಿಣ ಒಳನಾಡಿನ ಚಿತ್ರದುರ್ಗ ಉತ್ತರ, ತುಮಕೂರಿನ ಪಾವಗಢ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಆಂದ್ರ ಗಡಿ ಭಾಗಗಳ ಅಲ್ಲಲ್ಲಿ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಕೆಲವು ಸೀಮಿತ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಹೆಚ್ಚು ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆಗಳು ಕಡಿಮೆಯಾಗುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

1 hour ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

2 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

11 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

11 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

12 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

21 hours ago