Advertisement
ವೆದರ್ ಮಿರರ್

ಹವಾಮಾನ ವರದಿ | 06.11.2025 | ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸೂಚನೆ.. ಚಳಿ ನಿರೀಕ್ಷೆ

Share

07.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದ್ದು ಛಳಿಯ ವಾತಾವರಣ ಹೆಚ್ಚಾಗುವ ನಿರೀಕ್ಷೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡ, ತುಂತುರು ಮಳೆಯ ಮುನ್ಸೂಚನೆ ಇದ್ದರೂ, ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶೀತ ಗಾಳಿಯು ಪ್ರಭಾವದಿಂದ ಮೋಡ ಮಾತ್ರ ಇರಬಹುದು.
ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ನ. 7ರಂದು ಮಾತ್ರ ಮಳೆಯ ಮುನ್ಸೂಚನೆ ಇದೆ. ನಂತರ ಛಳಿ ಹಾಗೂ ಒಣ ಹವೆ ಮುಂದುವರಿಯಲಿದೆ.

ಉತ್ತರ ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ನ. 7ರ ನಂತರ ಉತ್ತರ ಒಳನಾಡಿನಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಛಳಿ ಗಾಳಿಯು ಪ್ರಭಾವದಿಂದ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.
ಈಗಿನಂತೆ ನ.8ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

ಫಿಲಿಪ್ಪೀನ್ಸ್ ಕರಾವಳಿಯ ಪ್ರಭಲ ಚಂಡಮಾರುತದ ಪರಿಣಾಮ ಬಂಗಾಳಕೊಲ್ಲಿಯ ಗಾಳಿಯು ಆ ಕಡೆಗೆ ಸೆಳೆಯಲ್ಪಡುವುದರಿಂದ ಹಿಂಗಾರು ಅಂತ್ಯಗೊಂಡಂತಿದೆ. ಉತ್ತರ ಭಾರತದ ಹಿಮಾಲಯ ಕಡೆಯಿಂದ ಬೀಸುತ್ತಿರುವ ಶೀತ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಛಳಿಯ ವಾತಾವರಣವು ಹೆಚ್ಚಾಗುವ ನಿರೀಕ್ಷೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago