ಫೆ.1 ಹಾಗೂ ಫೆ.2 ರಂದು ಮಳೆಯಾಗಬಹುದಾ..? | ಹೇಗಿದೆ ಹವಾಮಾನ ?

January 29, 2025
10:49 PM
ಫೆಬ್ರವರಿ 1 ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

31.01.2025 ಹಾಗೂ 01.02.2025ರ ಕರ್ನಾಟಕದ ಹವಾಮಾನ ಮುನ್ಸೂಚನೆ:

ಜನವರಿ 31 ರಂದು ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಫೆಬ್ರವರಿ 1 ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಮಲೆನಾಡು ಪ್ರದೇಶಗಳಾದ ಕೊಡಗು ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನದಲ್ಲಿ ಮೋಡದ ವಾತಾವರಣ ಇರಲಿದ್ದು, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆ ಸ್ವಲ್ಪ ಜೋರಿರುವ ಸಾಧ್ಯತೆಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡ ಮಾತ್ರ ಇರಬಹುದು.

ಫೆಬ್ರವರಿ 2 ರಿಂದ ರಾಜ್ಯದಾದ್ಯಂತ ಮತ್ತೆ ಎಂದಿನಂತೆ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಚಳಿಯ ಪ್ರಮಾಣವು ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ಸಾಧ್ಯತೆಗಳಿವೆ. ಈ ಮಳೆಯು ಬಂಗಾಳಕೊಲ್ಲಿಯಲ್ಲಿ ಗಾಳಿಯ ಸಂಚಾರದಲ್ಲಿ ಆಗುತ್ತಿರುವ ಬದಲಾವಣೆಯ ಕಾರಣದಿಂದ ಇರಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror