Advertisement
ಸುದ್ದಿಗಳು

ಫೆ.1 ಹಾಗೂ ಫೆ.2 ರಂದು ಮಳೆಯಾಗಬಹುದಾ..? | ಹೇಗಿದೆ ಹವಾಮಾನ ?

Share

31.01.2025 ಹಾಗೂ 01.02.2025ರ ಕರ್ನಾಟಕದ ಹವಾಮಾನ ಮುನ್ಸೂಚನೆ:

ಜನವರಿ 31 ರಂದು ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಫೆಬ್ರವರಿ 1 ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಮಲೆನಾಡು ಪ್ರದೇಶಗಳಾದ ಕೊಡಗು ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನದಲ್ಲಿ ಮೋಡದ ವಾತಾವರಣ ಇರಲಿದ್ದು, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆ ಸ್ವಲ್ಪ ಜೋರಿರುವ ಸಾಧ್ಯತೆಗಳಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡ ಮಾತ್ರ ಇರಬಹುದು.

ಫೆಬ್ರವರಿ 2 ರಿಂದ ರಾಜ್ಯದಾದ್ಯಂತ ಮತ್ತೆ ಎಂದಿನಂತೆ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಚಳಿಯ ಪ್ರಮಾಣವು ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ಸಾಧ್ಯತೆಗಳಿವೆ. ಈ ಮಳೆಯು ಬಂಗಾಳಕೊಲ್ಲಿಯಲ್ಲಿ ಗಾಳಿಯ ಸಂಚಾರದಲ್ಲಿ ಆಗುತ್ತಿರುವ ಬದಲಾವಣೆಯ ಕಾರಣದಿಂದ ಇರಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

5 hours ago

ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ – ಭಾರಿ ಮಳೆಯಿಂದ 50 ಕ್ಕೂ ಅಧಿಕ ಮಂದಿ ಸಾವು ; 10 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ

ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…

5 hours ago

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

13 hours ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

20 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

1 day ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

1 day ago