ಈಗಾಗಲೇ ರಾಜ್ಯದ ಅಲ್ಲಲ್ಲಿ ಮೋಡದ ವಾತಾವರಣ ಉಂಟಾಗುತ್ತಿದ್ದು, ಹಗಲಿನ ಉಷ್ಣಾಂಶವೂ ಏರಿಕೆಯಾಗುತ್ತಿದೆ. ಫೆಬ್ರವರಿ 20 ನಂತರ ಆಗ್ನೇಯ ಶ್ರೀಲಂಕಾ ಸಮೀಪ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿರುವುದರಿಂದ ಈಗ ಬಂಗಾಳಕೊಲ್ಲಿಯಲ್ಲಿ ಬೀಸುತ್ತಿರುವ ಗಾಳಿಯ ದಿಕ್ಕು ಬದಲಾಗುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ರಾತ್ರಿಯ ವೇಳೆ ಸಹಿತ ಉಷ್ಣಾಂಶ ಮತ್ತು ವಾತಾವರಣದ ತೇವಾಂಶ ಸ್ವಲ್ಪ ಮಟ್ಟಿಗೆ ಏರಿಕೆಯಾಗುವ ಸಾಧ್ಯತೆಗಳಿವೆ.……… ಮುಂದೆ ಓದಿ…….
ಆದರೆ, ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆಗಳಿಲ್ಲದಿದ್ದರೂ, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಕಾಣಿಸುತ್ತಿದೆ. ಹೆಚ್ಚಿನ ಭಾಗಗಳಲ್ಲಿ ದಟ್ಟ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಬಹುದು. ಫೆಬ್ರವರಿ 25 ರಿಂದ ತಿರುವಿಕೆಯು ಶಿಥಿಲಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಉಷ್ಣಾಂಶವೂ ಸ್ವಲ್ಪ ಮಟ್ಟಿಗೆ ತಗ್ಗಬಹುದು ಮತ್ತು ಬಿಸಿಲಿನ ವಾತಾವರಣ ಮುಂದುವರಿಯಬಹುದು. ಲಾ ನಿನಾ ಪರಿಣಾಮ ಇರುವುದರಿಂದ ಮಾರ್ಚ್ ತಿಂಗಳ ಕೊನೆಯಲ್ಲಿ ರಾಜ್ಯದಲ್ಲಿ ಬೇಸಿಗೆ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…