ರಾಜ್ಯದಲ್ಲಿ ಸೈಕ್ಲೋನ್ ಭೀತಿ | ಮುಂದಿನ 5 ದಿನ ಈ ಪ್ರದೇಶಗಳಲ್ಲಿ ಭಾರೀ ವರ್ಷಧಾರೆ…!? | ಎಚ್ಚರಿಕೆ ನೀಡಿದ ಇಲಾಖೆ |

May 6, 2023
10:08 AM

ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಒಳನಾಡು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಶನಿವಾರ ಮತ್ತು ಭಾನುವಾರವೂ ಮಳೆಯಾಗಲಿದೆ. ಆದರೆ ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಸರಣಿ ರ್ಯಾಲಿ ನಡೆಸಲಿದ್ದು, ಮಳೆರಾಯ ಅಡ್ಡಿಪಡಿಸಲಿದ್ದಾನೆಯೇ ಎಂಬುದು ಪ್ರಶ್ನೆಯಾಗಿದೆ. ಜೊತೆಗೆ ಬಿಜೆಪಿಗೆ ತಲೆಬಿಸಿಯಾಗಿ ಪರಿಣಮಿಸಿದೆ.

IMD ಅಧಿಕಾರಿಗಳ ಪ್ರಕಾರ, ನೈಋತ್ಯ ಮಧ್ಯಪ್ರದೇಶದಿಂದ ತಮಿಳುನಾಡಿಗೆ ಒಳನಾಡಿನ ಕರ್ನಾಟಕದಾದ್ಯಂತ ಗಾಳಿಯ ಪ್ರಭಾವ ವಿರಳಗೊಂಡಿದೆ. ಉತ್ತರ ತಮಿಳುನಾಡಿನ ಮೇಲೆ ಚಂಡಮಾರುತದ ಪರಿಚಲನೆಯೂ ಇದೆ. ಈ ವ್ಯವಸ್ಥೆಗಳ ರಚನೆಯಿಂದಾಗಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಹಗಲಿನಲ್ಲಿ ಹಗುರದಿಂದ ಸಾಧಾರಣ ಮಳೆಯಿದ್ದರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಒಳನಾಡಿನ ಬಹುತೇಕ ಭಾಗಗಳಲ್ಲಿ ರಾತ್ರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ ದಿನಗಳಲ್ಲಿ ಕ್ಯುಮುಲೋನಿಂಬಸ್ ಮೋಡಗಳು ಕೂಡ ರಚನೆಯಾಗಲಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಐಎಂಡಿ ಅಧಿಕಾರಿಗಳು ಬೆಂಗಳೂರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ. ಸದ್ಯ ಮಳೆಯು ಬೇಸಿಗೆಯ ತಾಪಕ್ಕೆ ಕೊಂಚ ವಿರಾಮ ತಂದಿದೆ. ನಗರದಲ್ಲಿ ಬುಧವಾರ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಮತ್ತು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಈ ವಾರ 14 ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. 5 ರಾಜ್ಯಗಳಲ್ಲಿ ಲಘು ಮಳೆ ಮತ್ತು 10 ರಾಜ್ಯಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಎತ್ತರದ ಗುಡ್ಡಗಾಡು ಪ್ರದೇಶಗಳಲ್ಲಿ ಹಿಮಪಾತದ ಎಚ್ಚರಿಕೆ ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror